ಪ್ರಮೋದ್ 
ಸಿನಿಮಾ ಸುದ್ದಿ

ಹಿರಿಯ ನಟ ಜಗ್ಗೇಶ್ ಜೊತೆ ತೆರೆ ಹಂಚಿಕೊಂಡಿದ್ದು ಪ್ಲಸ್ ಪಾಯಿಂಟ್: ಪ್ರಮೋದ್

ಕಿರುತೆರೆಯಿಂದ ಹಿರಿತೆರೆಗೆ ಬಂದಿರುವ ಪ್ರಮೋದ್ ಗೆ ತಾಳ್ಮೆಯೇ ಉತ್ತಮ ಸ್ನೇಹಿತನಂತೆ ಕಂಡಿದೆ. 2015ರಲ್ಲಿ...

ಕಿರುತೆರೆಯಿಂದ ಹಿರಿತೆರೆಗೆ ಬಂದಿರುವ ಪ್ರಮೋದ್ ಗೆ ತಾಳ್ಮೆಯೇ ಉತ್ತಮ ಸ್ನೇಹಿತನಂತೆ ಕಂಡಿದೆ. 2015ರಲ್ಲಿ ಗೀತಾ ಬ್ಯಾಂಗಲ್ ಸ್ಟೋರ್ ಚಿತ್ರದ ಮೂಲಕ ಸಿನಿಮಾಕ್ಕೆ ಪಾದಾರ್ಪಣೆ ಮಾಡಿದ ಪ್ರಮೋದ್ ಎರಡನೇ ಚಿತ್ರ ಪ್ರೀಮಿಯರ್ ಪದ್ಮಿನಿಗೆ ಬರಲು ಸುಮಾರು 3 ವರ್ಷ ಬೇಕಾಯಿತು.
ಉತ್ತಮ ಕಥೆಯ ಸಿನಿಮಾದಲ್ಲಿ ನಟಿಸಿ ಒಳ್ಳೆಯ ಹೆಸರು ಗಳಿಸಿದ್ದ ಪ್ರಮೋದ್ ನಂತರ ಕಷ್ಟದ ಸೋಲಿನ ದಿನಗಳನ್ನು ಕಂಡರು. ಇಂದು ಮತ್ತೆ ವೃತ್ತಿಯಲ್ಲಿ ಹೊಸ ಅಧ್ಯಾಯ ಆರಂಭವಾಗಿದ್ದು ಹೊಸದನ್ನು ನಿರೀಕ್ಷಿಸುತ್ತಿದ್ದೇನೆ ಎಂದರು. ಚಿತ್ರದಲ್ಲಿ ಪಾತ್ರ ನನಗೆ ಹತ್ತಿರವಾಗಬೇಕು. ಕೆಲವು ಕಹಿ ಅನುಭವಗಳೊಂದಿಗೆ ಸಿನಿಮಾದ ನಿರ್ಮಾಣ ಸಂಸ್ಥೆ ಕೂಡ ಮುಖ್ಯ ಎನ್ನುವುದು ಗೊತ್ತಾಗಿದೆ. ಇದಕ್ಕೆಲ್ಲಾ ಸಮಯ ಹಿಡಿದಿದೆ ಎಂದರು.
ಪ್ರೀಮಿಯರ್ ಪದ್ಮಿನಿ ಚಿತ್ರ ನಿರ್ಮಿಸಿದವರು ಧಾರಾವಾಹಿ ನಿರ್ಮಾಪಕಿ ಶೃತಿ ನಾಯ್ಡು. ನಿರ್ದೇಶಕ ರಮೇಶ್ ಇಂದ್ರ ಅವರು ಬಂದು ಕಥೆ ಹೇಳಿದಾಗ ಹಿಡಿಸಿತು. ಒಂದು ನಿರ್ದಿಷ್ಟ ಪಾತ್ರಕ್ಕೆ ಅವರು ನನ್ನನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದರು. ನನ್ನ ಮೊದಲ ಸಿನಿಮಾ ನೋಡಿದ್ದ ಅವರು, ಈ ಪಾತ್ರಕ್ಕೆ ಹೊಂದಿಕೆಯಾಗುತ್ತೇನೆ ಎಂದು ಅನಿಸಿರಬೇಕು, ನಿರ್ಮಾಪಕರ ಮನವೊಲಿಸಿ ನನ್ನನ್ನು ಪಾತ್ರಕ್ಕೆ ಹಾಕಿದರು. ಅವರಿಬ್ಬರಿಗೂ ಬೇಸರವಾಗದ ರೀತಿಯಲ್ಲಿ ಕೆಲಸ ಮಾಡಿದ್ದೇನೆ ಎನಿಸುತ್ತದೆ ಎಂದರು ಪ್ರಮೋದ್.ಚಿತ್ರದಲ್ಲಿ ತಮ್ಮದು ಎರಡು ಪಾತ್ರವಿದೆ ಎಂದರು.
ಮೇರು ನಟ ಜಗ್ಗೇಶ್ ಅವರು ಚಿತ್ರದ ಮುಖ್ಯ ಪಾತ್ರಧಾರಿಯಾಗಿದ್ದು ಅವರ ಜೊತೆ ಕೆಲಸ ಮಾಡಿದ್ದು ಒಳ್ಳೆಯ ಅನುಭವ ನೀಡಿತು. ಅವರಿಂದ ಅನೇಕ ವಿಷಯಗಳನ್ನು ಕಲಿತು ನನ್ನನ್ನು ಗುರುತಿಸಿಕೊಳ್ಳಲು ಸಹಕಾರಿಯಾಯಿತು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT