ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ನಾಳೆ ಅಣ್ಣಾವ್ರ ಹುಟ್ಟುಹಬ್ಬ: ರಾಜ್ಯ ಸರ್ಕಾರದಿಂದಲೇ ಆಚರಣೆ, ಒಂದು ದಿನ ಮುಂಚಿತವಾಗಿ ಶುಭ ಕೋರಿದ ಮುಖ್ಯಮಂತ್ರಿ

ನಾಳೆ ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಏಪ್ರಿಲ್ 24 ರಂದು ಜನಿಸಿದ ಡಾ. ರಾಜ್ ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಅವರ ಹುಟ್ಟುಹಬ್ಬವನ್ನು ರಾಜ್ಯ ಸರ್ಕಾರದಿಂದಲೇ ಆಚರಿಸುವುದಾಗಿ ಮುಖ್ಯಮಂತ್ರಿ ಎಚ್ . ಡಿ . ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ನಾಳೆ ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಏಪ್ರಿಲ್ 24 ರಂದು ಜನಿಸಿದ ಡಾ. ರಾಜ್ ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಅವರ  ಹುಟ್ಟುಹಬ್ಬವನ್ನು ರಾಜ್ಯ  ಸರ್ಕಾರದಿಂದಲೇ ಆಚರಿಸುವುದಾಗಿ ಮುಖ್ಯಮಂತ್ರಿ ಎಚ್ . ಡಿ . ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಒಂದು ದಿನ ಮುಂಚಿತವಾಗಿಯೇ ರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಅಲ್ಲದೆ ಆಚರಣೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಅವರು ಕೇಳಿಕೊಂಡಿದ್ದಾರೆ.

ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ.ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಆಡು ಮುಟ್ಟದ ಸೊಪ್ಪಿಲ್ಲ ಡಾ. ರಾಜ್ ಕುಮಾರ್ ಅಭಿನಯಿಸದ ಪಾತ್ರಗಳಿಲ್ಲ ಎಂಬಂತೆ ಎಲ್ಲಾ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಡಾ. ರಾಜ್ ಕುಮಾರ್ ಒಬ್ಬ ನಟನಾಗಿ ಚಿತ್ರರಂಗಕ್ಕೆ, ಮೇರು ವ್ಯಕ್ತಿತ್ವದ ಆದರ್ಶ ಜೀವನದ ಉದಾಹರಣೆಯಾಗಿ ನಾಡಿನ ಅನೇಕ ಪ್ರತಿಭಾವಂತರಿಗೆ ಮಾರ್ಗದರ್ಶನ ನೀಡಿದ್ದಾರೆ.  
ರಾಜ್ ಕುಮಾರ್ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿರಬಹುದು ಆದರೆ, ಅವರ ಪಾತ್ರಗಳ ಹಾಗೂ ಆದರ್ಶಮಯ ಜೀವನದ ಮೂಲಕ ಇಂದಿಗೂ ಕನ್ನಡ ನಾಡಿನ ಮನೆ ಮನೆಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ