ಬೆಂಗಳೂರು: ನಾಳೆ ವರನಟ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಏಪ್ರಿಲ್ 24 ರಂದು ಜನಿಸಿದ ಡಾ. ರಾಜ್ ನಾಡಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು, ಅವರ ಹುಟ್ಟುಹಬ್ಬವನ್ನು ರಾಜ್ಯ ಸರ್ಕಾರದಿಂದಲೇ ಆಚರಿಸುವುದಾಗಿ ಮುಖ್ಯಮಂತ್ರಿ ಎಚ್ . ಡಿ . ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಒಂದು ದಿನ ಮುಂಚಿತವಾಗಿಯೇ ರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಅಲ್ಲದೆ ಆಚರಣೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಅವರು ಕೇಳಿಕೊಂಡಿದ್ದಾರೆ.
ಡಾ. ರಾಜ್ ಕುಮಾರ್ ಕನ್ನಡ ನಾಡಿನ ಸಾಂಸ್ಕೃತಿಕ ರಾಯಭಾರಿ. ತೆರೆಯ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲಿಯೂ ಅವರ ಔದಾರ್ಯ, ಅಂತಃಕರಣ, ಜೀವನ ಮೌಲ್ಯಗಳು ಅನುಕರಣೀಯ. ನಾಳೆ ಅವರ ಹುಟ್ಟುಹಬ್ಬ.ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆ ರಾಜಣ್ಣ ಅವರ ಹುಟ್ಟು ಹಬ್ಬ ಆಚರಿಸುತ್ತಿದೆ. ಎಲ್ಲರೂ ಭಾಗವಹಿಸಿ. ಡಾ ರಾಜ್ ಹುಟ್ಟುಹಬ್ಬದ ಶುಭಾಶಯಗಳು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಆಡು ಮುಟ್ಟದ ಸೊಪ್ಪಿಲ್ಲ ಡಾ. ರಾಜ್ ಕುಮಾರ್ ಅಭಿನಯಿಸದ ಪಾತ್ರಗಳಿಲ್ಲ ಎಂಬಂತೆ ಎಲ್ಲಾ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಡಾ. ರಾಜ್ ಕುಮಾರ್ ಒಬ್ಬ ನಟನಾಗಿ ಚಿತ್ರರಂಗಕ್ಕೆ, ಮೇರು ವ್ಯಕ್ತಿತ್ವದ ಆದರ್ಶ ಜೀವನದ ಉದಾಹರಣೆಯಾಗಿ ನಾಡಿನ ಅನೇಕ ಪ್ರತಿಭಾವಂತರಿಗೆ ಮಾರ್ಗದರ್ಶನ ನೀಡಿದ್ದಾರೆ.
ರಾಜ್ ಕುಮಾರ್ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿರಬಹುದು ಆದರೆ, ಅವರ ಪಾತ್ರಗಳ ಹಾಗೂ ಆದರ್ಶಮಯ ಜೀವನದ ಮೂಲಕ ಇಂದಿಗೂ ಕನ್ನಡ ನಾಡಿನ ಮನೆ ಮನೆಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos