ಒಂದಲ್ಲ ಎರಡಲ್ಲ ಸಿನಿಮಾ ಗೆ ಪ್ರಶಸ್ತಿ ಗರಿ 
ಸಿನಿಮಾ ಸುದ್ದಿ

ಪ್ರಶಸ್ತಿಯ ಗರಿ: 'ಒಂದಲ್ಲ ಎರಡಲ್ಲ' ರಿಮೇಕ್ ಗೆ ಮುಗಿಬಿದ್ದ ನಿರ್ಮಾಪಕರು!

ಕನ್ನಡ ಸಿನಿಮಾಗಳು ಸದ್ದಿಲ್ಲದೆ ಸುದ್ದಿಯಾಗುತ್ತಾ ಇವೆ, ಒಂದಲ್ಲ ಎರಡಲ್ಲ ಸಿನಿಮಾ ಕೂಡ ಭಾರೀ ಸದ್ದು ಮಾಡುತ್ತಿದೆ. ಕಳೆದ ವರ್ಷ ರಿಲೀಸ್​ ಆಗಿ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ...

ಕನ್ನಡ ಸಿನಿಮಾಗಳು ಸದ್ದಿಲ್ಲದೆ ಸುದ್ದಿಯಾಗುತ್ತಾ ಇವೆ, 'ಒಂದಲ್ಲ ಎರಡಲ್ಲ' ಸಿನಿಮಾ ಕೂಡ ಭಾರೀ ಸದ್ದು ಮಾಡುತ್ತಿದೆ. ಕಳೆದ ವರ್ಷ ರಿಲೀಸ್​ ಆಗಿ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಒಳ್ಳೆ ಪ್ರತಿಪ್ರಿಯೆ ಪಡೆದಿದ್ದ ಸಿನಿಮಾಕ್ಕೆ ಈಗ ಮತ್ತೊಂದು ಗೌರವ ಸಿಕ್ಕಿದೆ. 
ಕನ್ನಡದ ಅದ್ಭುತ ಸಿನಿಮಾಗಳಲ್ಲಿ ಒಂದಾದ ‘ರಾಮ ರಾಮ ರೇ’ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ, ‘ಒಂದಲ್ಲ ಎರಡಲ್ಲ’ ಸಿನಿಮಾಕ್ಕೆ ಕ್ರಿಟಿಕ್​ ಚಾಯ್ಸ್​​ ಫಿಲಂ ಅವಾರ್ಡ್ಸ್​​ ಸಿಕ್ಕಿದೆ.
ಹೆಬ್ಬುಲಿ ಸಿನಿಮಾ ನಿರ್ಮಾಣ ಮಾಡಿದ್ದ ಉಮಾಪತಿ ಶ್ರೀನಿವಾಸ್​ ಈ ಸಿನಿಮಾವನ್ನ ನಿರ್ಮಾಣ ಮಾಡಿದ್ರು. ನಿನ್ನೆ ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನಿರ್ದೇಶಕ ಸತ್ಯ ಪ್ರಕಾಶ್​ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ದೇಶದ ವಿಮರ್ಶಕರ ಸೊಸೈಟಿಯಿಂದ ನೀಡಲ್ಪಡುವ ಸಿಸಿಎಫ್​ಎ ದಕ್ಷಿಣದ ಅತ್ಯುತ್ತಮ ಸಿನಿಮಾ ಅವಾರ್ಡ್ ​ಬಾಚಿಕೊಂಡಿದ್ದಾರೆ.
ಸತ್ಯಪ್ರಕಾಶ್ ಅವರ ಸಾಮಾಜಿಕ ಡ್ರಾಮಾ 7 ವರ್ಷದ ಮಗುವನ್ನು ಕುರಿತಾಗಿದ್ದು, ಸಮೀರಾ ಮತ್ತು ಹಸು ಬಾನುಗೆ ಸಂಬಂಧಿಸಿದ ಕಥೆಯಾಗಿದೆ,  ಈ ಸಿನಿಮಾ ರಿಮೇಕ್ ರೈಟ್ಸ್ ಗಾಗಿ ಮುಗಿಬಿದ್ದಿದ್ದಾರೆ, ತೆಲುಗು, ತಮಿಳು ಮತ್ತು ಮರಾಠಿ ಭಾಷೆಗೆ ರಿಮೇಕ್ ಹಕ್ಕು ಪಡೆಯಲು ಮುಂದಾಗಿದ್ದಾರೆ. ಈ ಸಂಬಂಧ ಈಗಾಗಲೇ ನಿರ್ಮಾಪಕರ ಜೊತೆ ಚರ್ಚೆ ನಡೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT