ಒಂದಲ್ಲ ಎರಡಲ್ಲ ಸಿನಿಮಾ ಗೆ ಪ್ರಶಸ್ತಿ ಗರಿ 
ಸಿನಿಮಾ ಸುದ್ದಿ

ಪ್ರಶಸ್ತಿಯ ಗರಿ: 'ಒಂದಲ್ಲ ಎರಡಲ್ಲ' ರಿಮೇಕ್ ಗೆ ಮುಗಿಬಿದ್ದ ನಿರ್ಮಾಪಕರು!

ಕನ್ನಡ ಸಿನಿಮಾಗಳು ಸದ್ದಿಲ್ಲದೆ ಸುದ್ದಿಯಾಗುತ್ತಾ ಇವೆ, ಒಂದಲ್ಲ ಎರಡಲ್ಲ ಸಿನಿಮಾ ಕೂಡ ಭಾರೀ ಸದ್ದು ಮಾಡುತ್ತಿದೆ. ಕಳೆದ ವರ್ಷ ರಿಲೀಸ್​ ಆಗಿ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ...

ಕನ್ನಡ ಸಿನಿಮಾಗಳು ಸದ್ದಿಲ್ಲದೆ ಸುದ್ದಿಯಾಗುತ್ತಾ ಇವೆ, 'ಒಂದಲ್ಲ ಎರಡಲ್ಲ' ಸಿನಿಮಾ ಕೂಡ ಭಾರೀ ಸದ್ದು ಮಾಡುತ್ತಿದೆ. ಕಳೆದ ವರ್ಷ ರಿಲೀಸ್​ ಆಗಿ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಒಳ್ಳೆ ಪ್ರತಿಪ್ರಿಯೆ ಪಡೆದಿದ್ದ ಸಿನಿಮಾಕ್ಕೆ ಈಗ ಮತ್ತೊಂದು ಗೌರವ ಸಿಕ್ಕಿದೆ. 
ಕನ್ನಡದ ಅದ್ಭುತ ಸಿನಿಮಾಗಳಲ್ಲಿ ಒಂದಾದ ‘ರಾಮ ರಾಮ ರೇ’ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ, ‘ಒಂದಲ್ಲ ಎರಡಲ್ಲ’ ಸಿನಿಮಾಕ್ಕೆ ಕ್ರಿಟಿಕ್​ ಚಾಯ್ಸ್​​ ಫಿಲಂ ಅವಾರ್ಡ್ಸ್​​ ಸಿಕ್ಕಿದೆ.
ಹೆಬ್ಬುಲಿ ಸಿನಿಮಾ ನಿರ್ಮಾಣ ಮಾಡಿದ್ದ ಉಮಾಪತಿ ಶ್ರೀನಿವಾಸ್​ ಈ ಸಿನಿಮಾವನ್ನ ನಿರ್ಮಾಣ ಮಾಡಿದ್ರು. ನಿನ್ನೆ ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ನಿರ್ದೇಶಕ ಸತ್ಯ ಪ್ರಕಾಶ್​ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ದೇಶದ ವಿಮರ್ಶಕರ ಸೊಸೈಟಿಯಿಂದ ನೀಡಲ್ಪಡುವ ಸಿಸಿಎಫ್​ಎ ದಕ್ಷಿಣದ ಅತ್ಯುತ್ತಮ ಸಿನಿಮಾ ಅವಾರ್ಡ್ ​ಬಾಚಿಕೊಂಡಿದ್ದಾರೆ.
ಸತ್ಯಪ್ರಕಾಶ್ ಅವರ ಸಾಮಾಜಿಕ ಡ್ರಾಮಾ 7 ವರ್ಷದ ಮಗುವನ್ನು ಕುರಿತಾಗಿದ್ದು, ಸಮೀರಾ ಮತ್ತು ಹಸು ಬಾನುಗೆ ಸಂಬಂಧಿಸಿದ ಕಥೆಯಾಗಿದೆ,  ಈ ಸಿನಿಮಾ ರಿಮೇಕ್ ರೈಟ್ಸ್ ಗಾಗಿ ಮುಗಿಬಿದ್ದಿದ್ದಾರೆ, ತೆಲುಗು, ತಮಿಳು ಮತ್ತು ಮರಾಠಿ ಭಾಷೆಗೆ ರಿಮೇಕ್ ಹಕ್ಕು ಪಡೆಯಲು ಮುಂದಾಗಿದ್ದಾರೆ. ಈ ಸಂಬಂಧ ಈಗಾಗಲೇ ನಿರ್ಮಾಪಕರ ಜೊತೆ ಚರ್ಚೆ ನಡೆಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

SCROLL FOR NEXT