ಅಕ್ಷತಾ ಶ್ರೀನಿವಾಸ್ 
ಸಿನಿಮಾ ಸುದ್ದಿ

'ಬ್ರಹ್ಮಚಾರಿ' ನನಗಾಗಿ ಮತ್ತೆ ಮಾಡುತ್ತಿರುವ ಸಿನಿಮಾದಂತಿದೆ: ಅಕ್ಷತಾ ಶ್ರೀನಿವಾಸ್

ಹೊಸ ಹಿರೋಯಿನ್ ಅಕ್ಷತಾ ಶ್ರೀನಿವಾಸ್ ಗೆ ಡಬಲ್ ದಮಾಕಾ, ಮಂಗಳೂರಿನ ಚೆಲುವೆ ಏಕಕಾಲದಲ್ಲಿ ಎರಡು ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ.

ಹೊಸ ಹಿರೋಯಿನ್ ಅಕ್ಷತಾ ಶ್ರೀನಿವಾಸ್ ಗೆ ಡಬಲ್  ದಮಾಕಾ, ಮಂಗಳೂರಿನ ಚೆಲುವೆ ಏಕಕಾಲದಲ್ಲಿ ಎರಡು ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಚಿರಂಜೀವಿ ಸರ್ಜಾ ಅವರ ಮುಂದಿನ ಸಿನಿಮಾ ಶಿವ ತೇಜಸ್ಸು ಸಿನಿಮಾದ ಅಡಿಷನ್ ನಲ್ಲಿ ಪಾಲ್ಗೊಂಡಿದ್ದ ಅಕ್ಷತಾ ಅಲ್ಲಿ ಅವಕಾಶ ಪಡೆಯುವುದರ ಜೊತೆಗೆ ಬ್ರಹ್ಮಾಚಾರಿ ಸಿನಿಮಾ ನಿರ್ಮಾಪಕರ ಗಮನ ಸೆಳೆದಿದ್ದಾರೆ.

ಚಂದ್ರ ಮೋಹನ್ ನಿರ್ದೇಶನದ ಬ್ರಹ್ಮಚಾರಿ 100  ಪರ್ಸೆಂಟ್ ವರ್ಜಿನ್ ಚಿತ್ರಕ್ಕಾಗಿ ಎರಡನೇ ಹಿರೋಯಿನ್ ಹುಡುಕಾಟ ನಡೆಸುತ್ತಿದ್ದ ತಂಡಕ್ಕೆ ಅಕ್ಷತಾ ಪಿಟ್ ಎನಿಸಿದ್ದಾರೆ.ಇದರಿಂದ ಎಕ್ಸೈಟ್ ಆಗಿರುವ ಅಕ್ಷತಾ ಶ್ರೀನಿವಾಸ್, ಪರಸಂಗ ಸಿನಿಮಾ ಮೂಲಕ  ಸಿನಿಮಾ ವೃತ್ತಿ ಆರಂಭಿಸಿದೆ. ಬ್ರಹ್ಮಾಚಾರಿ  ನನಗಾಗಿ ಮತ್ತೆ ಮಾಡುತ್ತಿರುವ ಸಿನಿಮಾದಂತಿದೆ ಎಂದು ಹೇಳಿದರು.ಈ ಸಿನಿಮಾದಲ್ಲಿ ಸತೀಶ್ ನೀನಾಸಂ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ.

ಉದಯ್ ಮೆಹ್ತಾ ನಿರ್ಮಾಣದ ಚಿತ್ರದಲ್ಲಿ ಅದಿತಿ ಪ್ರಭುದೇವ ನಾಯಕಿ ಪ್ರಧಾನ ಪಾತ್ರ ಮಾಡುತ್ತಿದ್ದಾರೆ. ದತ್ತಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದು ದಿನ ಶಿವ ತೇಜಸ್ಸು ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡರೆ ಮೂರು ದಿನ ಬ್ರಹ್ಮಚಾರಿ ಚಿತ್ರದ ಚಿತ್ರೀಕರಣ ಮುಗಿಸಿರುವುದಾಗಿ ತಿಳಿಸಿದ್ದಾರೆ. ಮಂಗಳೂರಿನಿಂದ ಈಗ ಬೆಂಗಳೂರಿಗೆ ಅಕ್ಷತಾ ಶ್ರೀನಿವಾಸ ಸ್ಥಳಾಂತರವಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT