ವಿ ಹರಿಕೃಷ್ಣ-ವಾಣಿ ಹರಿಕೃಷ್ಣ 
ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ದಾಂಪತ್ಯದಲ್ಲಿ ಅಪಸ್ವರ?

ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮತ್ತು ವಾಣಿ ದಂಪತಿ ಜೀವನದಲ್ಲಿ ಮುನಿಸು ಕಾಣಿಸಿಕೊಂಡಿದೆ ಎಂಬ ಮಾತುಗಳು ಗಾಂಧಿನಗರದಲ್ಲಿ ಹರಿದಾಡುತ್ತಿವೆ.

ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮತ್ತು ವಾಣಿ ದಾಂಪತ್ಯ ಜೀವನದಲ್ಲಿ ಮುನಿಸು ಕಾಣಿಸಿಕೊಂಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಹೌದು. ಕುರುಕ್ಷೇತ್ರ ಮತ್ತು ರಾಂಧವ ಚಿತ್ರದಲ್ಲಿ ಹಾಡಿದ್ದ ವಾಣಿ ಹರಿಕೃಷ್ಣ ಅವರ ಹಾಡುಗಳನ್ನು ತೆಗೆದು ಹಾಕಲಾಗಿದೆ. ವಿ. ಹರಿಕೃಷ್ಣ ಅವರು ಕುರುಕ್ಷೇತ್ರ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದರು. ಈ ಚಿತ್ರದಲ್ಲಿ ಒಂದು ಹಾಡನ್ನು ವಾಣಿ ಅವರಿಂದ ಹಾಡಿಸಲಾಗಿತ್ತು. ಆದರೆ ಚಿತ್ರದ ಆಡಿಯೋ ಬಿಡುಗಡೆಯಾದ ನಂತರ ವಾಣಿ ಹಾಡಿದ್ದ ಹಾಡನ್ನು ಬೇರೆಯವರು ಹಾಡಿರುವುದು ಗೊತ್ತಾಗಿ ವಾಣಿ ಅವರು ಬೇಸರಗೊಂಡಿದ್ದರು. 
ಇನ್ನು ರಾಂಧವ ಚಿತ್ರಕ್ಕೆ ವಿ. ಹರಿಕೃಷ್ಣ ಅವರ ಶಿಷ್ಯ ಶಶಾಂಕ್ ಶೇಷಗಿರಿ ಸಂಗೀತ ಸಂಯೋಜಿಸಿದ್ದು ಈ ಚಿತ್ರದಲ್ಲೂ ವಾಣಿ ಅವರು ಹಾಡಿದ್ದ ಹಾಡನ್ನು ಕಿತ್ತು ಹಾಕಲಾಗಿದೆ. ಈ ಎರಡು ಘಟನೆಗಳಿಂದ ಬೇಸರಗೊಂಡಿರುವ ವಾಣಿ ಅವರು ಫೇಸ್ ಬುಕ್ ನಲ್ಲಿ ತಮ್ಮ ನೋವನ್ನು ಹೊರಹಾಕಿದ್ದಾರೆ.
ವಾಣಿ ಹರಿಕೃಷ್ಣ ಅವರು ಫೇಸ್ ಬುಕ್ ಪೋಸ್ಟ್ ನಲ್ಲಿ 'ಬದುಕೇ ಬೇಡ ಅನ್ನಿಸಿಬಿಡುತ್ತದೆ , ಒಂದು ಹಾಡೇ ಜೀವನವಲ್ಲ ಅಂತಾರೆ, ಆದರೆ ನನಗೆ ಎಷ್ಟೋ ಹಾಡುಗಳು ನನ್ನದಾಗುಳಿಯಲಿಲ್ಲ, ಈಗ " ಕುರುಕ್ಷೇತ್ರ" ಹಾಗೂ "ರಾಂಧವ" ಚಿತ್ರ ಗಳಲ್ಲಿ ನನ್ನನ್ನು ಹಾಡಿಸಿ , ಧ್ಧನಿ ಉಳಿಸಿಲ್ಲ , ನಮ್ಮನ್ನು ಹಾಡಿಸಲೇಬಾರದು ನಂತರ ಬೇರೆಯವರನ್ನು ಹಾಡಿಸುವುದಾದರೆ ಎಂದು ಬರೆದುಕೊಂಡಿದ್ದಾರೆ. 
ಈ ಘಟನೆ ಸದ್ಯ ಹರಿಕೃಷ್ಣ ದಾಂಪತ್ಯದಲ್ಲಿ ಮುನಿಸಿಗೆ ಕಾರಣವಾಗಿದೆಯಾ ಎಂಬ ವಿಚಾರ ಕೇಳಿಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT