ವಿ ಹರಿಕೃಷ್ಣ-ವಾಣಿ ಹರಿಕೃಷ್ಣ 
ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್‌ನ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ದಾಂಪತ್ಯದಲ್ಲಿ ಅಪಸ್ವರ?

ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮತ್ತು ವಾಣಿ ದಂಪತಿ ಜೀವನದಲ್ಲಿ ಮುನಿಸು ಕಾಣಿಸಿಕೊಂಡಿದೆ ಎಂಬ ಮಾತುಗಳು ಗಾಂಧಿನಗರದಲ್ಲಿ ಹರಿದಾಡುತ್ತಿವೆ.

ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮತ್ತು ವಾಣಿ ದಾಂಪತ್ಯ ಜೀವನದಲ್ಲಿ ಮುನಿಸು ಕಾಣಿಸಿಕೊಂಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಹೌದು. ಕುರುಕ್ಷೇತ್ರ ಮತ್ತು ರಾಂಧವ ಚಿತ್ರದಲ್ಲಿ ಹಾಡಿದ್ದ ವಾಣಿ ಹರಿಕೃಷ್ಣ ಅವರ ಹಾಡುಗಳನ್ನು ತೆಗೆದು ಹಾಕಲಾಗಿದೆ. ವಿ. ಹರಿಕೃಷ್ಣ ಅವರು ಕುರುಕ್ಷೇತ್ರ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದರು. ಈ ಚಿತ್ರದಲ್ಲಿ ಒಂದು ಹಾಡನ್ನು ವಾಣಿ ಅವರಿಂದ ಹಾಡಿಸಲಾಗಿತ್ತು. ಆದರೆ ಚಿತ್ರದ ಆಡಿಯೋ ಬಿಡುಗಡೆಯಾದ ನಂತರ ವಾಣಿ ಹಾಡಿದ್ದ ಹಾಡನ್ನು ಬೇರೆಯವರು ಹಾಡಿರುವುದು ಗೊತ್ತಾಗಿ ವಾಣಿ ಅವರು ಬೇಸರಗೊಂಡಿದ್ದರು. 
ಇನ್ನು ರಾಂಧವ ಚಿತ್ರಕ್ಕೆ ವಿ. ಹರಿಕೃಷ್ಣ ಅವರ ಶಿಷ್ಯ ಶಶಾಂಕ್ ಶೇಷಗಿರಿ ಸಂಗೀತ ಸಂಯೋಜಿಸಿದ್ದು ಈ ಚಿತ್ರದಲ್ಲೂ ವಾಣಿ ಅವರು ಹಾಡಿದ್ದ ಹಾಡನ್ನು ಕಿತ್ತು ಹಾಕಲಾಗಿದೆ. ಈ ಎರಡು ಘಟನೆಗಳಿಂದ ಬೇಸರಗೊಂಡಿರುವ ವಾಣಿ ಅವರು ಫೇಸ್ ಬುಕ್ ನಲ್ಲಿ ತಮ್ಮ ನೋವನ್ನು ಹೊರಹಾಕಿದ್ದಾರೆ.
ವಾಣಿ ಹರಿಕೃಷ್ಣ ಅವರು ಫೇಸ್ ಬುಕ್ ಪೋಸ್ಟ್ ನಲ್ಲಿ 'ಬದುಕೇ ಬೇಡ ಅನ್ನಿಸಿಬಿಡುತ್ತದೆ , ಒಂದು ಹಾಡೇ ಜೀವನವಲ್ಲ ಅಂತಾರೆ, ಆದರೆ ನನಗೆ ಎಷ್ಟೋ ಹಾಡುಗಳು ನನ್ನದಾಗುಳಿಯಲಿಲ್ಲ, ಈಗ " ಕುರುಕ್ಷೇತ್ರ" ಹಾಗೂ "ರಾಂಧವ" ಚಿತ್ರ ಗಳಲ್ಲಿ ನನ್ನನ್ನು ಹಾಡಿಸಿ , ಧ್ಧನಿ ಉಳಿಸಿಲ್ಲ , ನಮ್ಮನ್ನು ಹಾಡಿಸಲೇಬಾರದು ನಂತರ ಬೇರೆಯವರನ್ನು ಹಾಡಿಸುವುದಾದರೆ ಎಂದು ಬರೆದುಕೊಂಡಿದ್ದಾರೆ. 
ಈ ಘಟನೆ ಸದ್ಯ ಹರಿಕೃಷ್ಣ ದಾಂಪತ್ಯದಲ್ಲಿ ಮುನಿಸಿಗೆ ಕಾರಣವಾಗಿದೆಯಾ ಎಂಬ ವಿಚಾರ ಕೇಳಿಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT