ಶಾರ್ದೂಲ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ನಿಜಕ್ಕೂ ದೆವ್ವವಿದೆಯೇ? 'ಶಾರ್ದೂಲ'ದಲ್ಲಿ ಭೂತ ಹುಡುಕಿ ಹೊರಟ ನಿರ್ದೇಶಕ ಅರವಿಂದ್ ಕೌಶಿಕ್

ಚೇತನ್ ಚಂದ್ರ ಮತ್ತು ಕೃತಿಕಾ ಅಭಿನಯದ ಶಾರ್ದೂಲ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ. ನಿಜಕ್ಕೂ ದೆವ್ವ ಇದೆಯೇ ಅಥವಾ ಕೇವಲ ...

ಚೇತನ್ ಚಂದ್ರ ಮತ್ತು ಕೃತಿಕಾ ಅಭಿನಯದ ಶಾರ್ದೂಲ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ. ನಿಜಕ್ಕೂ ದೆವ್ವ ಇದೆಯೇ ಅಥವಾ ಕೇವಲ ಕಲ್ಪನೆಯೇ ಎಂಬುದನ್ನು ಹುಡುಕಲು ನಿರ್ದೇಶಕರು ಸಿನಿಮಾದಲ್ಲಿ ಪ್ರಶ್ನಿಸಿದ್ದಾರೆ.
ಸತ್ವ ಮೀಡಿಯಾ ಅಡಿಯಲ್ಲಿ ಅರವಿಂದ್ ಕೌಶಿಕ್ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾ ಶಾರ್ದೂಲ. ಈಗಾಗಲೇ ಚಿತ್ರೀಕರಣವನ್ನು ಮುಗಿಸಿ ಬಿಡುಗಡೆಗೆ ಸಿದ್ದವಾಗಿದೆ,
ದಿನ ನಿತ್ಯದ ಆಗುಹೋಗುಗಳ ಕುರಿತಾಗಿ ಅರಿವಿಟ್ಟುಕೊಂಡಿರುವ ಮನುಷ್ಯ ಎದ್ದಾಗಿನಿಂದ ತಾನು ನಿರ್ವಹಿಸುವ ಪ್ರತಿ ಕೆಲಸದಲ್ಲಿಯೂ ತನ್ನದೇ ಆದ ನಿಯಂತ್ರಣವನ್ನು ಹೊಂದಿರುತ್ತಾನೆ. ಅದರ ಬಗ್ಗೆ ಯಾರಿಗೂ ಅಂತಹ ಕೌತುಕತೆಗಳೇನು ಇರಲಿಕಿಲ್ಲ.
ಆದರೆ ಹೊಸ ವಾತಾವರಣಕ್ಕೆ ಮನುಷ್ಯ ಪ್ರಯಾಣ ಬೆಳೆಸಿದಾಗ ಆತನಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತದೆ. ಪ್ರತಿ ನಿಮಿಷವೂ ಆತನಲ್ಲಿ ಹೊಸ ಹೊಸ ಅನುಭವಗಳಾಗುತ್ತದೆ. ಅಂತಹ ಸೂಕ್ಷ್ಮ ಎಳೆಯನ್ನಿಟ್ಟುಕೊಂಡು ಶಾರ್ದೂಲ ಸಿನಿಮಾವನ್ನು ತಯಾರಿಸಲಾಗಿದೆಯಂತೆ. ಈ ಚಿತ್ರಕ್ಕೆ ರವಿತೇಜಾ ಮತ್ತು ಚೇತನ್ ಚಂದ್ರ ನಾಯಕರಾಗಿದ್ದು, ಐಶ್ವರ್ಯಾ ಮತ್ತು ಕೃತಿಕಾ ರವೀಂದ್ರ ಅವರಿಗೆ ಜತೆಯಾಗಿದ್ದಾರೆ. 
ಇನ್ನು ಈ ಸಿನಿಮಾವನ್ನು ಅರವಿಂದ್ ಕೌಶಿಕ್ ತಮ್ಮದೇ ಬ್ಯಾನರ್ ನಲ್ಲಿ ಸ್ನೇಹಿತ ರೋಹಿತ್ ಕಲ್ಯಾಣ್ ಸಹಭಾಗಿತ್ವದಲ್ಲಿ ನಿರ್ಮಾಣವನ್ನು ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT