ನಟ ವಸಿಷ್ಠ ಸಿಂಹ ಹಾಗೂ ವಂಚಕ ವೆಂಕಟೇಶ್ 
ಸಿನಿಮಾ ಸುದ್ದಿ

ನಟ ವಸಿಷ್ಠ ಸಿಂಹ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಮಹಿಳೆಗೆ ವಂಚನೆ

ಕನ್ನಡ ಖ್ಯಾತ ಚಿತ್ರನಟ ವಸಿಷ್ಠ ಸಿಂಹ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚಿಸುತ್ತಿದ್ದ ಖತರ್ ನಾಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕನ್ನಡ ಖ್ಯಾತ ಚಿತ್ರನಟ ವಸಿಷ್ಠ ಸಿಂಹ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚಿಸುತ್ತಿದ್ದ ಖತರ್ ನಾಕ್ ಕಳ್ಳನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕನ್ನಡದ ಕಂಚಿನ ಧ್ವನಿಯ ನಟನೆಂದೇ ಖ್ಯಾತಿ ಪಡೆದಿರುವ ವಸಿಷ್ಠ ಎನ್​ ಸಿಂಹ ಅವರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಹುಡುಗಿಯರಿಗೆ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೋಲಿಸರು ಬಂದಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ 22 ವರ್ಷದ ವ್ಯಕ್ತಿಯೊಬ್ಬ ವಸಿಷ್ಠ ಸಿಂಹ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಮಹಿಳೆಯೊಬ್ಬರಿಗೆ 25 ಸಾವಿರ ರೂ. ವಂಚನೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ನಟ ದೂರು ದಾಖಲಿಸಿದ ಬಳಿಕ ಸುಂಕದಕಟ್ಟೆಯ ಹೊಯ್ಸಳ ನಗರ ನಿವಾಸಿ ವೆಂಕಟೇಶ್ ಬವಸರ್ ನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವೆಂಕಟೇಶ್ ನಟ ವಸಿಷ್ಠ ಸಿಂಹ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆಯನ್ನು ತೆರೆದಿದ್ದಾನೆ. ಬಳಿಕ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಚಾಟ್ ಮಾಡಲು ಆರಂಭಿಸಿದ್ದಾನೆ. ಅಲ್ಲದೆ ಹೀಗೆ ಮಾತಾಡುತ್ತಾ ಅವರಿಗೆ ತನ್ನ ವಾಟ್ಸಾಪ್ ನಂಬರ್ ಕೂಡ ಕಳುಹಿಸಿದ್ದಾನೆ. ಆರೋಪಿ ಕೊಟ್ಟ ನಂಬರನ್ನು ಟ್ರೂ ಕಾಲರ್ ನಲ್ಲಿ ನೋಡಿದಾಗ ಅಲ್ಲಿಯೂ ವಸಿಷ್ಠ ಸಿಂಹ ಅಂತಾನೇ ಬಂದಿರುವುದರಿಂದ ಎಲ್ಲರೂ ಅದು ನಟ ವಸಿಷ್ಠ ಸಿಂಹ ಅವರದ್ದೇ ನಂಬರ್ ಎಂದು ನಂಬಿದ್ದಾರೆ.

ಬಳಿಕ ನಾನು ವಸಿಷ್ಠ ಸಿಂಹ ಅವರ ಸಹಾಯಕ. ಅವರ ಮೊಬೈಲ್​ ನಂಬರ್​ ಕೊಡ್ತೀನಿ ಎಂದು ಹೇಳಿ ತನ್ನ ಇನ್ನೊಂದು ಮೊಬೈಲ್​ ನಂಬರ್​ ನೀಡುತ್ತಿದ್ದ. ಅಂತೆಯೇ ಸಿನಿಮಾ, ಧಾರಾವಾಹಿಗಳಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಅವರಿಂದ ಹಣ ತೆಗೆದುಕೊಂಡು ವಂಚಿಸುತ್ತಿದ್ದ. ಇದೀಗ ಆರೋಪಿ ಸೈಬರ್​ ಕ್ರೈ ಪೋಲಿಸರ ಬಲೆಗೆ ಬಿದ್ದಿದ್ದಾನೆ. ಆರೋಪಿಯನ್ನು ವೆಂಕಟೇಶ್​ ಎಂದು ಗುರುತಿಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಚಾರವನ್ನು ನಟ ವಸಿಷ್ಠ ಸಿಂಹ ತಮ್ಮ ಫೇಸ್​ಬುಕ್​ ಪೇಜ್​ನಲ್ಲಿ ಬರೆದುಕೊಂಡಿದ್ದು, ನಕಲಿ ಸ್ಟಾರ್​ಗಳ ಬಗ್ಗೆ ಎಚ್ಚರದಿಂದಿರಿ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT