ರಮ್ಯಾ ಮದುವೆ ಬಗ್ಗೆ ತಾಯಿ ಸ್ಪಷ್ಟನೆ 
ಸಿನಿಮಾ ಸುದ್ದಿ

ದುಬೈನಲ್ಲಿ ಸಪ್ತಪದಿ ತುಳಿಯಲಿದ್ದಾರಾ ರಮ್ಯಾ: ಮಗಳ ಮದುವೆ ಬಗ್ಗೆ ತಾಯಿ ರಂಜಿತಾ ಹೇಳಿದ್ದೇನು?

ಸ್ಯಾಂಡಲ್‍ವುಡ್ ತಾರೆ, ಮಂಡ್ಯ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಶೀಘ್ರದಲ್ಲೆ ದುಬೈ ನಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. 

ಸ್ಯಾಂಡಲ್‍ವುಡ್ ತಾರೆ, ಮಂಡ್ಯ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಶೀಘ್ರದಲ್ಲೆ  ದುಬೈ ನಲ್ಲಿ ವಿವಾಹವಾಗಲಿದ್ದಾರೆ ಎಂಬ ಸುದ್ದಿಗಳು ಮಾದ್ಯಮಗಳಲ್ಲಿ ಹರಿದಾಡುತ್ತಿವೆ. 

ತನ್ನ ಮಾಜಿ ಗೆಳೆಯ ರಾಫೆಲ್ ಜತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಆದರೆ ಈ ಬಗ್ಗೆ ರಮ್ಯಾರ ತಾಯಿ ರಂಜಿತಾ ಖಾಸಗಿ ಸುದ್ದಿ ವಾಹಿನಿ ಜತೆ ಮಾತನಾಡುತ್ತಾ ಹಲವಾರು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. 

ರಮ್ಯಾಳ ಮದುವೆ ಮಾಡಬೇಕಾದರೆ ನಾವೇನು ಕದ್ದುಮುಚ್ಚಿ ಮಾಡುವ ಅಗತ್ಯವಿಲ್ಲ. ಮಾಧ್ಯಮ, ಸಿನಿಮಾ, ಗೆಳೆಯರು ಎಲ್ಲರಿಗೂ ಹೇಳಿಯೇ ಮಾಡುತ್ತೇವೆ ಎಂದಿದ್ದಾರೆ. ರಮ್ಯಾಗೆ ಅವರ ದೇಶಕ್ಕೆ ಹೋಗಲು ಇಷ್ಟವಿರಲಿಲ್ಲ ರಾಫೆಲ್‌ಗೆ ಇಲ್ಲಿಗೆ ಬರಲು ಇಷ್ಟವಿರಲಿಲ್ಲ ಈ ರೀತಿಯ ಭಿನ್ನಾಭಿಪ್ರಾಯಗಳ ಕಾರಣ ಮದುವೆ ಮುಂದಕ್ಕೆ ಹೋಗಲಿಲ್ಲ ಎಂದಿದ್ದಾರೆ. 

ಸದ್ಯಕ್ಕೆ ರಮ್ಯಾ ದಿಲ್ಲಿಯಲ್ಲೇ ಇದ್ದಾರೆ. ಆರಾಮವಾಗಿದ್ದು ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ದುಬೈನಲ್ಲಿ ರಾಫೆಲ್ ಜತೆಗೆ ಮದುವೆಯಾಗುತ್ತಾರೆ ಎಂಬುದು ಕೇವಲ ವದಂತಿ ಅಷ್ಟೆ. ರಮ್ಯಾ ಮತ್ತು ರಾಫೆಲ್ ನಡುವಿನ ಉತ್ತಮ ಸ್ನೇಹಿತರಾಗಿದ್ದಾರೆ. ಆದರೆ ಮದುವೆಯಾಗುತ್ತಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ. 

ಮದುವೆ ಬಗ್ಗೆ ಇನ್ನೂ ಯೋಚಿಸಿಲ್ಲವಂತೆ ರಮ್ಯಾ. ಪದೇ ಪದೇ ಮದುವೆ ಪ್ರಸ್ತಾಪ ಮಾಡುತ್ತಾರೆ ಎಂಬ ಕಾರಣಕ್ಕೆ ಅಮ್ಮನ ಜತೆಗೆ ಮುನಿಸಿಕೊಂಡಿದ್ದಾರಂತೆ. "ಅವಳು ಮದುವೆಯಾಗ್ತೀನಿ ಎಂದರೆ ನನಗೆ ಅದಕ್ಕಿಂತ ಖುಷಿ ಇನ್ನೊಂದಿಲ್ಲ. ಆದರೆ ಕೇಳಿದಾಗಲೆಲ್ಲಾ ಈಗ ಬೇಡ, ಈಗ ಬೇಡ ಎನ್ನುತ್ತಾಳೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT