ರವಿಬೆಳೆಗೆರೆ-ದರ್ಶನ್-ವಿಜಯ್ 
ಸಿನಿಮಾ ಸುದ್ದಿ

'ಬಡವ ರಾಸ್ಕಲ್' ಸುದ್ದಿಗೋಷ್ಠಿ: ಪತ್ರಕರ್ತ ರವಿ ಬೆಳೆಗೆರೆ ವಿರುದ್ಧ ಕಿಡಿಕಾರಿದ ಕರಿಚಿರತೆ ವಿಜಯ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ವೈಯಕ್ತಿಕ ಜೀವನದ ವಿರುದ್ದ ಮಾತನಾಡಿದ್ದ ಹಿರಿಯ ಪತ್ರಕರ್ತ ರವಿಬೆಳೆಗೆರೆ ಅವರನ್ನು ನಟ ದುನಿಯಾ ವಿಜಯ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ವೈಯಕ್ತಿಕ ಜೀವನದ ವಿರುದ್ದ ಮಾತನಾಡಿದ್ದ ಹಿರಿಯ ಪತ್ರಕರ್ತ ರವಿಬೆಳೆಗೆರೆ ಅವರನ್ನು ನಟ ದುನಿಯಾ ವಿಜಯ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. 

ಬಡವ ರಾಸ್ಕಲ್ ಚಿತ್ರದ ಸುದ್ದಿಗೋಷ್ಠಿಯಲ್ಲಿ ಚಿತ್ರಕ್ಕೆ ಶುಭಕೋರಿದ ದುನಿಯಾ ವಿಜಯ್ ರವಿ ಬೆಳೆಗೆರೆ ವಿಚಾರವಾಗಿ ಮಾತನಾಡಿದ್ದು ಮೊದಲ ಆತ ತಮ್ಮ ಕುಟುಂಬ ನೆಟ್ಟಗಿದೆಯಾ ಎಂಬುದನ್ನು ನೋಡಿಕೊಳ್ಳಲಿ ಎಂದರು.

ರವಿ ಬೆಳೆಗೆರೆಗೆ ಇಬ್ಬರು ಹೆಂಡತಿಯರು. ಮೊದಲು ತಮ್ಮ ಕುಟುಂಬ ನೆಟ್ಟಗಿದೆಯಾ ಎಂದು ನೋಡಿಕೊಳ್ಳಲಿ. ಆಮೇಲೆ ದರ್ಶನ್ ಆಗಲಿ, ನಮ್ಮ ಬಗ್ಗೆಯಾಗಲಿ ಮಾತನಾಡಲಿ. ಆರು ತಿಂಗಳು ಆಸ್ಪತ್ರೆಲಿ ಬಿದ್ದಿರುತ್ತಾನೆ. ಇನ್ನೂ ಬದುಕಿದ್ದಾನಾ ಅವನು? ಎಂದು ಏಕವಚನದಲ್ಲೇ ಕಿಡಿಕಾರಿದ್ದಾರೆ. 

ಯೂಟ್ಯೂಬ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದ ರವಿಬೆಳೆಗೆರೆ ದರ್ಶನ್ ಮತ್ತು ವಿಜಯ್ ವಿರುದ್ಧ ಮಾತನಾಡಿದ್ದರು. ದುನಿಯಾ ವಿಜಯ್ ಬ್ಲ್ಯಾಕ್ ಕೋಬ್ರಾ ಅಲ್ಲ ಕರಿ ಗೊಬ್ಬರ. ಎಷ್ಟು ಜನರನ್ನು ಮದುವೆಯಾಗುತ್ತೀಯಾ? ಮದುವೆ ಮಾಡಿಕೊಂಡು ಹೆಂಡತಿಯನ್ನು ಬಿಡುತ್ತಾನೆ. ಮತ್ತೊಬ್ಬಳನ್ನು ಕಟ್ಟಿಕೊಳ್ಳುತ್ತಾನೆ. ಇವನು ಜೈಲು ಗಿರಾಕಿನೇ ಎಂದು ಹೇಳಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT