ಗಣೇಶ್-ಪುನೀತ್ ರಾಜಕುಮಾರ್ 
ಸಿನಿಮಾ ಸುದ್ದಿ

ಗೀತಾ ಚಿತ್ರದಲ್ಲಿ 'ಕನ್ನಡವೇ ಸತ್ಯ ಕನ್ನಡವೇ ನಿತ್ಯ' ಹಾಡಿಗೆ ಧ್ವನಿಯಾದ ಪುನೀತ್!

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ 1980ರಲ್ಲಿ ನಡೆಯೋ ಕಥೆಯಾಗಿದೆ. ಆಗ ಗೋಕಾಕ್ ಚಳುವಳಿ ನಡೆದಿದ್ದು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಹೋರಾಟಕ್ಕೆ ನಟಸಾರ್ವಭೌಮ ಡಾ. ರಾಜಕುಮಾರ್ ನೇತೃತ್ವ ವಹಿಸಿದ್ದರು.

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ 1980ರಲ್ಲಿ ನಡೆಯೋ ಕಥೆಯಾಗಿದೆ. ಆಗ ಗೋಕಾಕ್ ಚಳುವಳಿ ನಡೆದಿದ್ದು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಹೋರಾಟಕ್ಕೆ ನಟಸಾರ್ವಭೌಮ ಡಾ. ರಾಜಕುಮಾರ್ ನೇತೃತ್ವ ವಹಿಸಿದ್ದರು.

ಇದೀಗ ಈ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ನಟ ಧ್ವನಿಗೂಡುತ್ತಿದೆ. ಹೌದು ಗೀತಾ ಚಿತ್ರಕ್ಕಾಗಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬ ಹಾಡನ್ನು ಪುನೀತ್ ರಾಜಕುಮಾರ್ ಅವರು ಆಡಿದ್ದಾರೆ. ಈ ಹಾಡಿಗಾಗಿ ಹೊಸ ಟಚ್ ನೀಡಲಾಗಿದೆ. 

ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಹಾಡನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್ ಬರೆದಿದ್ದಾರೆ. ಚಿತ್ರಕ್ಕೆ ಅನೂಪ್ ರೂಬೆನ್ಸ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ದಿವಂಗತ ನಟ ಶಂಕರ್ ನಾಗ್ ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ನಿರ್ದೇಶಕ ವಿಜಯ್ ನಾಗೇಂದ್ರ ಗೀತಾ ಚಿತ್ರವನ್ನು ನಿರ್ದೇಶಿಸಿದ್ದಾರೆ. ಗೋಲ್ಡನ್ ಫಿಲ್ಮಂ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಣವಾಗುತ್ತಿದ್ದು ಸೈಯದ್ ಸಲಾಂ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸೆಪ್ಟೆಂಬರ್ 27ಕ್ಕೆ ಚಿತ್ರ ಬಿಡುಗಡೆಗೆ ಚಿತ್ರತಂಡ ಯೋಜಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT