ಗೀತಾ ಚಿತ್ರದ ದೃಶ್ಯ 
ಸಿನಿಮಾ ಸುದ್ದಿ

ಗೋಲ್ಡನ್ ಸ್ಟಾರ್ 'ಗೀತಾ' ವಿತರಕರಾದ ಮಂಜುನಾಥ್ ಗೌಡ

ವಿಜಯ ನಾಗೇಂದ್ರ ಚೊಚ್ಚಲ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಪ್ರೇಕ್ಷಕ ರಲ್ಲಿ ಸಾಕಷ್ಟು ಕುತೂಹಲ ಹಾಗೂ ಭರವಸೆ ಮೂಡಿಸಿದೆ.

ವಿಜಯ ನಾಗೇಂದ್ರ ಚೊಚ್ಚಲ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಪ್ರೇಕ್ಷಕ ರಲ್ಲಿ ಸಾಕಷ್ಟು ಕುತೂಹಲ ಹಾಗೂ ಭರವಸೆ ಮೂಡಿಸಿದೆ.

ನಿರ್ಮಾಪಕ ಸೈಯದ್ ಸಲಾಮ್ ಅವರ ಸಹಯೋಗದೊಂದಿಗೆ ನಟ ಗಣೇಶ್ ತಮ್ಮ ಹೋಂ ಬ್ಯಾನರ್ ನಡಿಯಲ್ಲಿ ನಿರ್ಮಿಸಿರುವ ಈ ಚಿತ್ರವನ್ನು ಕೆಎಸ್ ಕೆ  ಶೋ ರೀಲ್ ನ ಮಂಜುನಾಥ್ ಗೌಡ ರಾಜ್ಯಾದ್ಯಂತ ವಿತರಣೆ ಮಾಡಲಿದ್ದಾರೆ.

ಚಿತ್ರವೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು  ಸೆಪ್ಟೆಂಬರ್ 27 ರಂದು ತೆರೆಗೆ ತರಲು ತಯಾರಕರು ಯೋಜಿಸುತ್ತಿದ್ದಾರೆ.ಗೀತಾದಲ್ಲಿ ಶಾನ್ವಿ ಶ್ರೀವಾಸ್ತವ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರೆ, ಪ್ರಯಾಗ ಮಾರ್ಟಿನ್ ಮತ್ತು ಪಾರ್ವತಿ ಅರುಣ್ ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.

ರೊಮ್ಯಾಂಟಿಕ್ ಡ್ರಾಮವಾಗಿರುವ ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ಅವರ ಹಾರೈಕೆಯೂ ಇದೆ.ಅವರು ಈ ಚಿತ್ರದ ಒಂದು ಹಾಡಿಗೆ ಸಾಹಿತ್ಯ ರಚನೆಯನ್ನೂ ಮಾಡಿದ್ದಾರೆ.

ಶಂಕರ್ ನಾಗ್ ಅವರ ಕ್ಲಾಸಿಕ್ ಚಿತ್ರದ ಶೀರ್ಷಿಕೆಯನ್ನು ಮರುಬಳಸಿಕೊಂಡಿರುವ ತ್ರವು ತನ್ನದೇ ಆದ ಕಾರಣಗಳಿಗೆ ಮುಖ್ಯವಾಗುತ್ತದೆ. ಕನ್ನಡದ ನೆಲದಲ್ಲಿ ನಡೆದ ಪ್ರಮುಖ ಚಳವಳಿ ಗೋಕಾಕ್ ಆಂದೋಲನವನ್ನು ಚಲನಚಿತ್ರವೊಂದರಲ್ಲಿ ಮರುನಿರೂಪಿಸಿರುವುದು ಇಲ್ಲಿನ ವಿಶೇಷಗಳಲ್ಲಿ ಒಂದಾಗಿದೆ. ಅಲ್ಲದೆ, ಪುನೀತ್ ರಾಜ್‌ಕುಮಾರ್ ಅವರು ಇತ್ತೀಚೆಗೆ ಒಂದು ಹಾಡನ್ನು ರೆಕಾರ್ಡ್ ಮಾಡಿದ್ದಾರೆ - ಕನ್ನಡವೆ ಸತ್ಯ, ಕನ್ನಡ ನಿತ್ಯ ಈ ಹಾಡು ಇಡೀ ಚಿತ್ರದ ಮೌಲ್ಯ ಹೆಚ್ಚುವಂತೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT