ಸತೀಶ್-ದರ್ಶನ್-ಯೋಗಿ 
ಸಿನಿಮಾ ಸುದ್ದಿ

ಸತೀಶ್ ನೀನಾಸಂ-ಲೂಸ್ ಮಾದ ಯೋಗಿ ಸಲಿಂಗಕಾಮಿಗಳು? ನಟ ದರ್ಶನ್ ಹೇಳಿದ್ದೇಕೆ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಜಯ್ ಪ್ರಸಾದ್ ನಿರ್ದೇಶನದ ಪರಿಮಳ ಲಾಡ್ಜ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಸತೀಶ್ ನೀನಾಸಂ ಮತ್ತು ಲೂಸ್ ಮಾದ ಯೋಗಿ ಅವರು ಸಲಿಂಗಕಾಮಿಗಳು ಅಂತಾ ಹೇಳಿ ಅಚ್ಚರಿ ಮೂಡಿಸಿದರು.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಜಯ್ ಪ್ರಸಾದ್ ನಿರ್ದೇಶನದ ಪರಿಮಳ ಲಾಡ್ಜ್ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಸತೀಶ್ ನೀನಾಸಂ ಮತ್ತು ಲೂಸ್ ಮಾದ ಯೋಗಿ ಅವರು ಸಲಿಂಗಕಾಮಿಗಳು ಅಂತಾ ಹೇಳಿ ಅಚ್ಚರಿ ಮೂಡಿಸಿದರು.

ಇದಕ್ಕೆ ಕಾರಣವೂ ಇದೆ. ನಿರ್ದೇಶಕ ವಿಜಯ್ ಪ್ರಸಾದ್ ಅವರು ಸತೀಶ್ ನೀನಾಸಂ ಮತ್ತು ಲೂಸ್ ಮಾದ ಯೋಗಿರನ್ನು ಚಿತ್ರದಲ್ಲಿ  ಸಲಿಂಗಕಾಮಿಗಳು ಅಂತ ತೋರಿಸಿದ್ದಾರೆ. ಇದನ್ನೇ ಹೇಳಿ ದರ್ಶನ್ ಕಾರ್ಯಕ್ರಮದಲ್ಲಿ ಅವರ ಕಾಲೆಳೆದಿದ್ದಾರೆ. 

ಪರಿಮಳ ಲಾಡ್ಜ್ ಚಿತ್ರದ ಬಗ್ಗೆ ದರ್ಶನ್ ಮೆಚ್ಚುಗೆಯ ಮಾತುಗಳನ್ನು ಆಡಿದರು. ಚಿತ್ರಕ್ಕೆ ಒಳ್ಳೆಯದಾಗಲಿ. ನಿರ್ದೇಶಕರು ವಿಭಿನ್ನ ರೀತಿಯ ಚಿತ್ರಗಳನ್ನು ಮಾಡಿ ಒಳ್ಳೆಯ ಸಂದೇಶವನ್ನು ನೀಡುತ್ತಾರೆ. ನೀವು ಅದೇ ರೀತಿ ಅಭಿರುಚಿಯ ಸಿನಿಮಾಗಳನ್ನು ಮಾಡಿ ಎಂದು ಹೇಳಿದರು.

ನಂತರ ಮಾಡನಾಡಿದ ಸತೀಶ್ ನೀನಾಸಂ ಅವರು ನಿರ್ದೇಶಕರು ನಮ್ಮನ್ನು ಸಲಿಂಗಕಾಮಿಗಳು ಎಂದು ತೋರಿಸಿದ್ದಾರೆ. ಅದು ಯಾಕೆ ಅಂತಾ ಚಿತ್ರವನ್ನು ನೋಡಿದಾಗಲೇ ಗೊತ್ತಾಗುತ್ತದೆ ಎಂದರು. 

ವಿಡಿಯೋ ಕೃಪೆ: ಕೆಎಫ್ಐ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT