ರಾಜವರ್ಧನ್ 
ಸಿನಿಮಾ ಸುದ್ದಿ

'ಬಿಚ್ಚುಗತ್ತಿ ಚಾಪ್ಟರ್-1' ಗಾಗಿ ಡಬ್ಬಿಂಗ್ ಸ್ಟುಡಿಯೊಗೆ ರಾಜವರ್ಧನ್ ಎಂಟ್ರಿ!

"ಬಿಚ್ಚುಗತ್ತಿ ಚಾಪ್ಟರ್-1 ದಳವಾಯಿ ದಂಗೆ" ಚಿತ್ರಕ್ಕಾಗಿ ಶುಕ್ರವಾರ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ರಾಜವರ್ಧನ್ ಡಬ್ಬಿಂಗ್ ನಡೆಸಿದ್ದಾರೆ. ಹರಿ ಸಂತೋಷ್ ನಿರ್ದೇಶನದ ಈ ಐತಿಹಾಸಿಕ ಚಿತ್ರದಲ್ಲಿ ನಟ ರಾಜವರ್ಧನ್ 15 ನೇ ಶತಮಾನದ ಪಾಳೇಗಾರ ಭರಮಣ್ಣನಾಯಕನ ಪಾತ್ರ ವಹಿಸಿದ್ದಾರೆ.

"ಬಿಚ್ಚುಗತ್ತಿ ಚಾಪ್ಟರ್-1 ದಳವಾಯಿ ದಂಗೆ" ಚಿತ್ರಕ್ಕಾಗಿ ಶುಕ್ರವಾರ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ರಾಜವರ್ಧನ್ ಡಬ್ಬಿಂಗ್ ನಡೆಸಿದ್ದಾರೆ. ಹರಿ ಸಂತೋಷ್ ನಿರ್ದೇಶನದ ಈ ಐತಿಹಾಸಿಕ ಚಿತ್ರದಲ್ಲಿ ನಟ ರಾಜವರ್ಧನ್ 15 ನೇ ಶತಮಾನದ ಪಾಳೇಗಾರ ಭರಮಣ್ಣನಾಯಕನ ಪಾತ್ರ ವಹಿಸಿದ್ದಾರೆ.

ರಾಜವರ್ಡನ್ ಅವರಿಗೆ  ಡಬ್ಬಿಂಗ್ ಎಂಜಿನಿಯರ್ ರಾಜಶೇಖರ್ ಅವರ ಭಾಗಗಳನ್ನು ಡಬ್ ಮಾಡಲು ಸಹಾಯ ನೀಡಿದ್ದಾರೆ."ರಾಜಶೇಖರ್ ಅವರಿಗೆ ಭಾಷೆಯ ಮೇಲೆ ಉತ್ತಮ ಹಿಡಿತ ಇದೆ. ಅವರು ಸಾಕಷ್ಟು ಅರಿತಿದ್ದಾರೆ.ಅದರಲ್ಲಿಯೂ ಇತಿಹಾಸದ ಬಗೆಗೆ ಅವರಿಗೆ ಸಾಕಷ್ಟು ತಿಳುವಳಿಕೆ ಇದೆ." ನಟ ಹೇಳಿದ್ದಾರೆ.ಅವರು ಇನ್ನೆರಡು ದಿನಗಳಲ್ಲಿ ತಮ್ಮ ಭಾಗದ ಡಬ್ಬಿಂಗ್ ಪೂರ್ಣಗೊಳಿಸಲಿದ್ದಾರೆ.ಈ ಪಾತ್ರದ ನಿರ್ವಹಣೆಗೆ ಮುನ್ನ ನಟ ಹಲವು ವಿಧದ ತರಬೇತಿ ಹೊಂದಿದ್ದಾರೆ.

ಹರಿಪ್ರಿಯಾ ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ "ಬಾಹುಬಲಿ" ಖ್ಯಾತಿಯ ಪ್ರಭಾಕರ್ ಕೂಡ ಖಳನಾಯಕನಾಗಿ ಮಿಂಚಿದ್ದಾರೆ.ಬಿ ಎಲ್ ವೇಣು ಬರೆದ ಕಾದಂಬರಿಯನ್ನು ಆಧರಿಸಿದ ಈ ಚಿತ್ರ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

ಇನ್ನು ಚಿತ್ರದ ಪ್ರಮುಖ ಪಾತ್ರಗಳಲ್ಲಿ ರೇಖಾ, ಕಲ್ಯಾಣಿ, ಶ್ರೀನಿವಾಸ್ ಮೂರ್ತಿ ಮತ್ತು ಡಿಂಗ್ರಿ ನಾಗರಾಜ್ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT