ಗಂಡುಗಲಿ ಮದಕರಿ ನಾಯಕನ ಸ್ಟಿಲ್ 
ಸಿನಿಮಾ ಸುದ್ದಿ

ಚಿತ್ರದುರ್ಗದಲ್ಲಿ ಗಂಡುಗಲಿ ಮದಕರಿ ನಾಯಕನಿಗೆ ಮುಹೂರ್ತ: ಡಿ. 6 ರಂದು ಅಧಿಕೃತ ಚಾಲನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಗಂಡುಗಲಿ ಕುಮಾರ ನಾಯಕ ಚಿತ್ರಕ್ಕೆ ಗಂಡು ಮೆಟ್ಟಿದ ನಾಡು ಚಿತ್ರದುರ್ಗದಲ್ಲಿ ಇಂದು ಸಾಂಪ್ರದಾಯಿಕವಾಗಿ ಮುಹೂರ್ತ ನಡೆಯುತ್ತಿದ್ದು, ಡಿಸೆಂಬರ್ 6 ರಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. 

ಬೆಂಗಳೂರು: ಚಿತ್ರದ ಕೊನೆಯ ಪಾಳೆಯಗಾರನ ಐತಿಹಾಸಿಕ ಕಥಾ ಹಂದರ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಗಂಡುಗಲಿ ಕುಮಾರ ನಾಯಕ ಚಿತ್ರಕ್ಕೆ ಗಂಡು ಮೆಟ್ಟಿದ ನಾಡು ಚಿತ್ರದುರ್ಗದಲ್ಲಿ ಇಂದು ಸಾಂಪ್ರದಾಯಿಕವಾಗಿ ಮುಹೂರ್ತ ನಡೆಯುತ್ತಿದ್ದು, ಡಿಸೆಂಬರ್ 6 ರಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. 

ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತಿತರರು ಚಿತ್ರದುರ್ಗದ ಬರಗೆರಮ್ಮ ಹಾಗೂ ಏಕಾನಾಥೇಶ್ವರಿ ದೇವಾಲಯದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. 

ಮದಕರಿ ನಾಯಕ ಹಾಗೂ 15 ನೇ ಶತಮಾನದಲ್ಲಿನ ಯೋಧರು ಪ್ರತಿನಿತ್ಯ ಈ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆಯುತ್ತಿದ್ದರು ಎಂಬುದಾಗಿ ಇತಿಹಾಸ ಹೇಳುತ್ತದೆ.  ಚಿತ್ರದುರ್ಗದ ಮದಕರಿ ನಾಯಕ ಸರ್ಕಲ್ ನಲ್ಲಿ ಆತನ ಪುತ್ಹಳಿಗೆ ನಮನ ಸಲ್ಲಿಸಿದ ಚಿತ್ರತಂಡ ನಂತರ ಮುರುಘಾ ರಾಜೇಂದ್ರ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯ ಆಶೀರ್ವಾದ ಪಡೆದುಕೊಂಡಿತು.

ಹಿರಿಯ ಕಲಾವಿದರಾದ ಶ್ರೀನಿವಾಸ್ ಮೂರ್ತಿ, ದೊಡ್ಡಣ್ಣ ಅಲ್ಲದೇ ಮುಂಬೈ, ಹೈದ್ರಾಬಾದ್ ಮತ್ತು ಚೆನ್ನೈನಿಂದ ಬಂದಿರುವ ತಂತ್ರಜ್ಞರು, ಕಲಾ ನಿರ್ದೇಶಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಿ.ಎಲ್. ವೇಲು ಅವರ ಕಾದಂಬರಿ ಆಧಾರಿತ ಐತಿಹಾಸಿಕ ಚಿತ್ರ ಇದಾಗಿದೆ. 

ಗಂಡುಗಲಿ ಮದಕರಿ ನಾಯಕನ ಬಗ್ಗೆ ವಿವಿಧ ಇತಿಹಾಸ ತಜ್ಞರಿಂದ ನಿರ್ದೇಶಕರು ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ನಾದಬ್ರಹ್ಮ ಹಂಸಲೇಖ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿಸಿದ್ದಾರೆ. ಅಶೋಕ್ ಕಶ್ಯಾಪ್ ಅವರ ವಾಯಾಗ್ರಹಣವಿರಲಿದೆ. ಚಿತ್ರದುರ್ಗ, ಮುಂಬೈ, ಹೈದ್ರಾಬಾದ್ ಹಾಗೂ ರಾಜಸ್ತಾನ್ ನಲ್ಲಿ ಚಿತ್ರೀಕರಣ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!

ಬೆಂಗಳೂರು: ತಾಜ್‌ ಹೋಟೆಲ್‌ನಲ್ಲಿ ಘೋರ ಕೃತ್ಯ; ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆಗೈದು ತಂದೆ ಆತ್ಮಹತ್ಯೆಗೆ ಯತ್ನ!

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್; ಮಧು ಬಂಗಾರಪ್ಪ ಜೊತೆ ಪಿಸುಮಾತು ವಿವಾದ; ಬಿ.ವೈ ವಿಜಯೇಂದ್ರ ಸ್ಪಷ್ಟನೆ