ಉಪೇಂದ್ರ 
ಸಿನಿಮಾ ಸುದ್ದಿ

ಪ್ರಭಾವಶಾಲೀ ಭ್ರಷ್ಟ ರೇಪಿಷ್ಟ್ ಗಳಿಗೆ ರತ್ನಗಂಬಳಿಯಾಗುವುದೇ? ಹತ್ಯಾಚಾರಿಗಳ ಎನ್ ಕೌಂಟರ್ ಕುರಿತು ಉಪೇಂದ್ರ ಹೀಗಂದ್ರು

 ಪಶುವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನ ತಂಡ ಎನ್ ಕೌಂಟರ್ ಮಾಡಿದ್ದು ದೇಶಾದ್ಯಂತ ಪೋಲೀಸ್ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತ ಸ್ಯಾಂಡಲ್ ವುಡ್ ರಿಯಲ್ ಸ್ಟಾರ್, ಪ್ರಜಾಕೀಯ ನಾಯಕನಾಗಿರುವ ಉಪೇಂದ್ರ ಮಾತ್ರ ತಮ್ಮದೇ ರೀತಿಯ ಹೇಳಿಕೆ ನೀಡುವುದರೊಡನೆ ಎಲ್ಲರ ಹ

ಬೆಂಗಳೂರು: ಪಶುವೈದ್ಯೆ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನ ತಂಡ ಎನ್ ಕೌಂಟರ್ ಮಾಡಿದ್ದು ದೇಶಾದ್ಯಂತ ಪೋಲೀಸ್ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತ ಸ್ಯಾಂಡಲ್ ವುಡ್ ರಿಯಲ್ ಸ್ಟಾರ್, ಪ್ರಜಾಕೀಯ ನಾಯಕನಾಗಿರುವ ಉಪೇಂದ್ರ ಮಾತ್ರ ತಮ್ಮದೇ ರೀತಿಯ ಹೇಳಿಕೆ ನೀಡುವುದರೊಡನೆ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ..

ಅತ್ಯಾಚಾರ ನಡೆಸಿದ್ದ ಆರೋಪಿಗಳು ಹೈದರಾಬಾದ್ ನ ಚೆರ್ಲಪಲ್ಲಿ ಕೇಂದ್ರ ಕಾರಾಗೃಹದಲ್ಲಿದ್ದು ಘಟನಾ ಸ್ಥಳದ ಮೊಹಜರು ನಡೆಸಿದ್ದ ವೇಳೆ ಅವರು ಅನುಚಿತ ವರ್ತನೆ ತೋರಿದ್ದ ಕಾರಣ ಎನ್ ಕೌಂಟರ್ ನಡೆಸಲಾಗಿದೆ ಎಂದು ಪೋಲೀಸ್ ಮಾಹಿತಿ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಉಪೇಂದ್ರ "ಈ ಎನ್ ಕೌಂಟರ್ ಪ್ರಭಾವಶಾಲೀ ಭ್ರಷ್ಟ ರೇಪಿಷ್ಟ್ ಗಳಿಗೆ ರತ್ನಗಂಬಳಿಯಾಗುವುದೇ?" ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಎನ್ ಕೌಂಟರ್ ಗೆ ಬಲಿಯಾದವರ ಹಿಂದೆ ಯಾರಿದ್ದರು ಎನ್ನುವುದು ತಿಳಿಯಬೇಕಿದೆ ಎಂದೂ ಹೇಳಿದ್ದಾರೆ.

"ಈ ನಾಲ್ಕು ಹುಡುಗರೇ ಆಕೆಯನ್ನು ರೇಪ್ ಮಾಡಿ ಸುಟ್ಟುಹಾಕಿದ್ದಾರೋ ಇಲ್ಲ ಇದರ ಹಿಂದೆ ಬೇರೆ ಯಾರೋ ಪ್ರಮುಖ ವ್ಯಕ್ತಿಗಳ ಕೈವಾಡವಿದೆಯೊ ? ಈ ರೀತಿಯ ಎನ್ಕೌಂಟರ್ರ್  ಪ್ರಮುಖ ವ್ಯಕ್ತಿಗಳ ಕೇಸ್ನಲ್ಲಿ ಯಾಕಾಗುವುದಿಲ್ಲ? ಕೋರ್ಟನಲ್ಲಿ ವಿಚಾರಣೆಗೂ ಮುನ್ನ ನಡೆದ ಈ ಎನ್ಕೌಂಟರ್ ಇನ್ನು ಮುಂದೆ ಪ್ರಭಾವಶಾಲೀ ಭ್ರಷ್ಟ ರೇಪಿಷ್ಟ್ ಗಳಿಗೆ ರತ್ನಗಂಬಳಿಯಾಗುವುದೇ?" ಉಪೇಂದ್ರ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಸ್ಯಾಂಡಲ್ ವುಡ್, ಟಾಲಿವುಡ್ ನಟ ನಟಿಯರು ಸೇರಿ ದೇಶದ ಜನತೆ ಪೋಲೀಸರ ಕಾರ್ಯವನ್ನು ಪ್ರಶಂಸುತ್ತಿದ್ದರೆ ಉಪೇಂದ್ರ ಂಆತ್ರ "ರಿಯಾಲಿಟಿ ಚೆಕ್" ಗೆ ಹೊರಟಿರುವುದು ಅವರ ಅಭಿಮಾನಿಗಳು ಹಾಗೂ ನೆಟ್ಟಿಗರಲ್ಲಿ ಅಚ್ಚರಿಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT