ಸ್ಯಾಂಡಲ್ ವುಡ್ ನಟಿ ಶೃತಿ ಕಾರು ಚಾಲಕ ಆತ್ಮಹತ್ಯೆ! 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಟಿ ಶೃತಿ ಕಾರು ಚಾಲಕ ಆತ್ಮಹತ್ಯೆ!

ಸ್ಯಾಂಡಲ್ ವುಡ್ ನಟಿ ಶೃತಿ ಕಾರು ಚಾಲಕನಾಗಿದ್ದ ಮಂಜುನಾಥ್ ಸಿಂಗ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರನಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋನಹಳ್ಳಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಶೃತಿ ಕಾರು ಚಾಲಕನಾಗಿದ್ದ ಮಂಜುನಾಥ್ ಸಿಂಗ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರನಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋನಹಳ್ಳಿ ಗ್ರಾಮದ ಬಳಿ ನಡೆದಿದೆ.

ಮಾಗಡಿ ರಸ್ತೆ ಫಾರೆಸ್ಟ್ ಗೇಟ್ಸಮೀಪ ಮರವೊಂದಕ್ಕೆ ನೇಣು ಹಾಕಿಕೊಂಡಿರುವ ಮಂಜುನಾಥ್ ಸಿಂಗ್ (25) ಕೆಲವು ವರ್ಷಗಳಿಂದ ನಟಿ ಶೃತಿ ಮತ್ತು ಶರಣ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೂಲತಃಅ ಚಿಕ್ಕಮಗಳೂರಿನ ಬೆಳವಾಡಿಯವರಾದ ಮಂಜುನಾಥ್ ಸುಮಾರು ಹದಿನೈದು ವರ್ಷಗಳಿಂದ ಮಾಚೋಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಮಂಜುನಾಥ್ ನಿನ್ನೆ ಕಡಬಗೆರೆಯಲ್ಲಿ ನಡೆಇದ್ದ ಪಾರ್ಟಿಗೆ ಹೋಗಿದ್ದನೆನ್ನಲಾಗಿದ್ದು ಆ ನಂತರ ಟವೆಲ್ ನಿಂದ ಕತ್ತಿಗೆ ಸುತ್ತಿಕೊಂಡು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತನ ಸಾವಿನ ಕುರಿತು ಹಲವು ಅನುಮಾನಗಳಿದ್ದು ಸೂಕ್ತ ತನಿಖೆಯಾಗಬೇಕೆಂದು ಮೃತನ ಕುಟುಂಬ ಆಗ್ರಹಿಸಿದೆ.

ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RSS ನೋಂದಣಿ ಬಗ್ಗೆ ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ: ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!

ಮೈಸೂರು: ಮಟ ಮಟ ಮಧ್ಯಾಹ್ನವೇ ಪಬ್‌ನಲ್ಲಿ ಭೀಕರ ಅಗ್ನಿ ದುರಂತ; ಇಬ್ಬರು ಸುಟ್ಟು ಕರಕಲು, 7 ಮಂದಿ ಸ್ಥಿತಿ ಗಂಭೀರ!

ಯಾರಿಗೂ ಬೇಡವಾದ ಅಕ್ರಮ ವಲಸಿಗರು: ತನ್ನದೇ ನಾಗರಿಕರ ನಿರಾಕರಿಸಿದ ಬಾಂಗ್ಲಾದೇಶ, ಗಡಿಯಲ್ಲಿ ಹೊಸ ಉದ್ವಿಗ್ನತೆ

ಲೆಬನಾನ್, ಸಿರಿಯಾ, ಗಾಜಾದಲ್ಲಿನ IDF ಸೇನೆ ಹಿಂದಕ್ಕೆ ಕರೆಸಲ್ಲ; America-Iran ಒಪ್ಪಂದ ನಮಗೆ ಅನ್ವಯವಾಗಲ್ಲ: ಇಸ್ರೇಲ್ ಎಚ್ಚರಿಕೆ

ಬೆಂಗಳೂರು ಕಾರ್ಯಕ್ರಮದಲ್ಲಿ ಗೌನ್ ಧರಿಸಿದ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್: RCB ಸ್ಟಾರ್ ಬ್ಯಾಟರ್ ಹೇಳಿದ್ದೇನು?

SCROLL FOR NEXT