ಸಂಜನಾ ಜೈನ್-ವಂದನಾ ಜೈನ್ 
ಸಿನಿಮಾ ಸುದ್ದಿ

ನಿರ್ಮಾಪಕಿ ವಂದನಾ ಜೈನ್ ಮೇಲೆ ನಟಿ ಸಂಜನಾ ಹಲ್ಲೆ!

ಗಂಡ-ಹೆಂಡತಿ ಚಿತ್ರದ ಮೂಲಕ ಹಲ್ ಚಲ್ ಸೃಷ್ಠಿಸಿದ್ದ ನಟಿ ಸಂಜನಾ ಗಲ್ರಾನಿ ಅವರು ಪಾರ್ಟಿ ಗುಂಗಲ್ಲಿ ಬಾಲಿವುಡ್ ನಿರ್ಮಾಪಕಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ಬೆಂಗಳೂರು: ಗಂಡ-ಹೆಂಡತಿ ಚಿತ್ರದ ಮೂಲಕ ಹಲ್ ಚಲ್ ಸೃಷ್ಠಿಸಿದ್ದ ನಟಿ ಸಂಜನಾ ಗಲ್ರಾನಿ ಅವರು ಪಾರ್ಟಿ ಗುಂಗಲ್ಲಿ ಬಾಲಿವುಡ್ ನಿರ್ಮಾಪಕಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ಬೆಂಗಳೂರಿನ ಖಾಸಗಿ ಪಬ್ ವೊಂದರಲ್ಲಿ ಡಿಸೆಂಬರ್ 24ರಂದು ಒಂದೇ ಟೇಬಲ್ ನಲ್ಲಿ ಸಂಜನಾ ಹಾಗೂ ನಿರ್ಮಾಪಕಿ ವಂದನಾ ಜೈನ್ ಪಾರ್ಟಿ ಮಾಡುತ್ತಿದ್ದರು. ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಮಾತಿನ ಚಕಮಿಕಿ ವಿಕೋಪಕ್ಕೆ ತಿರುಗಿದಾಗ ಸಂಜನಾ ಅವರು ವಿಸ್ಕಿ ಗ್ಲಾಸ್ ತೆಗೆದುಕೊಂಡು ವಂದನಾ ಮೂಗಿಗೆ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. 

ಈ ಘಟನೆ ಬಳಿಕ ವಂದನಾ ಜೈನ್ ಅವರು ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ಅವರು ಸಂಜನಾ ಅವರು ಗಲಾಟೆ ಮಾಡಿದ್ದಾರೆ ಎಂದು ದೂರು ಬಂದಿದೆ. 

ವಂದನಾ ಜೈನ್ ಅವರು ದೂರು ನೀಡಿದ್ದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎನ್ ಸಿಆರ್ ದಾಖಲಾಗಿದ್ದು ದೂರುದಾರರು ಹೆಚ್ಚಿನ ತನಿಖೆಗೆ ನ್ಯಾಯಾಲಯದಲ್ಲಿ ಅನುಮತಿ ಪಡೆದರೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ. 

ನನ್ನ ಬಳಿ ಗಲಾಟೆ ವಿಡಿಯೋ ಇದೆ
ಖಾಸಗಿ ಪಬ್ ನಲ್ಲಿ ನಡೆದ ಗಲಾಟೆಯ ವಿಡಿಯೋ ನನ್ನ ಬಳಿ ಇದೆ ಎಂದು ಸಂಜನಾ ಹೇಳಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಈ ವಿಡಿಯೋವನ್ನು ವೈರಲ್ ಮಾಡಲ್ಲ. ನನಗೆ ಪ್ರಚಾರ ಬೇಡ ಎಂದು ಹೇಳಿದ್ದಾರೆ.

ನಾನು ಮತ್ತು ದೂರು ವಂದನಾ ಇಬ್ಬರೂ ಗೆಳತಿಯರು. ಗೆಳತಿಯರು ಎಂದಾಗ ಒಂದು ಮಾತು ಬರುತ್ತೆ ಹೋಗುತ್ತೆ. ನಮ್ಮ ನಡುವೆಯೂ ಹೀಗೆಯೇ ಆಗಿದೆ ಅಷ್ಟೆ. ಇದಕ್ಕೆ ಮಸಾಲೆ ಸೇರಿಸುವ ಅಗತ್ಯವಿಲ್ಲ. ನಾನು ನಮ್ಮ ಮನೆಯಲ್ಲಿ ಆರಾಮಾಗಿದ್ದೇನೆ. ಅವರು ಕೂಡ ಅವರ ಮನೆಯಲ್ಲಿ ಹಾಯಾಗಿದ್ದಾರೆ. ಗಲಾಟೆ ದೃಶ್ಯ ನನ್ನ ಅಣ್ಣನ ಮೊಬೈಲ್​ನಲ್ಲಿ ರೆಕಾರ್ಡ್​ ಆಗಿದೆ. ಅಗತ್ಯವಿದ್ದರೆ ನಾನು ವಿಡಿಯೋ ನೀಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT