ರಘು ಭಟ್ 
ಸಿನಿಮಾ ಸುದ್ದಿ

ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿ ದರೋಡೆಕೋರರನ್ನು ಹಿಡಿದ ಸ್ಯಾಂಡಲ್ ವುಡ್ ನಟ

ಇಬ್ಬರು ದರೋಡೆಕೋರರನ್ನು ಸಿನಿಮೀಯ ಶೈಲಿಯಲ್ಲಿ ನಟ ರಘು ಭಟ್ ಬೆನ್ನಟ್ಟಿ ಹಿಡಿದ ಘಟನೆ ನಗರದ ಸೇಂಟ್ ಜಾನ್ ವೃತ್ತದ ಬಳಿ ಸಂಭವಿಸಿದೆ. 

ಬೆಂಗಳೂರು: ಇಬ್ಬರು ದರೋಡೆಕೋರರನ್ನು ಸಿನಿಮೀಯ ಶೈಲಿಯಲ್ಲಿ ನಟ ರಘು ಭಟ್ ಬೆನ್ನಟ್ಟಿ ಹಿಡಿದ ಘಟನೆ 
ನಗರದ ಸೇಂಟ್ ಜಾನ್ ವೃತ್ತದ ಬಳಿ ಸಂಭವಿಸಿದೆ.

 ಅಬ್ದುಲ್, ಮೊಹೀನ್ ಬಂಧಿತ ದರೋಡೆಕೋರರು. ಗುರುವಾರ ರಾತ್ರಿ ನಗರದ ಸಿಗ್ಮಾ ಮಾಲ್ ನಲ್ಲಿ ಅವನೇ ಶ್ರೀಮನ್ನಾರಾಯಣ ಚಿತ್ರ ವೀಕ್ಷಿಸಿ ರಘು ದಂಪತಿ ಕಾರಿನಲ್ಲಿ ವಾಪಸ್ಸಾಗುತ್ತಿದ್ದಾಗ, ಆರ್ ಎಂ ಝಡ್ ಬಳಿ ಅವರ ಎದುರಿನ ಕಾರನ್ನು ಅಡ್ಡಗಟ್ಟಿದ ದರೋಡೆಕೋರರು ಮಾರಕಾಸ್ತ್ರಗಳನ್ನು ತೋರಿಸಿ ಅದರಲ್ಲಿದ್ದರವ ಚಿನ್ನ, ನಗದು ದೋಚಿ ಪರಾರಿಯಾಗುತ್ತಿದ್ದರು.

 ಈ ದೃಶ್ಯವನ್ನು ಕಂಡ ರಘು ಅವರು,  ದರೋಡೆಕೋರರನ್ನು ಚೇಸ್ ಮಾಡಲು ಆರಂಭಿಸಿದಾಗ, ದರೋಡೆಕೋರರು ಬೈಕ್ ಸ್ಕೀಡ್ ಆಗಿ ಕೆಳಗೆ ಬಿದ್ದಿದ್ದಾರೆ. ಸುಮಾರು 2 ಕಿಮೀ ಚೇಸ್ ಮಾಡಿದ ಬಳಿಕ  ಭಾರತಿ ನಗರದ ಸೇಂಟ್ ಜಾನ್ಸ್ ವೃತ್ತದಲ್ಲಿ ರಘು, ದರೋಡೆಕೋರರನ್ನು ಹಿಡಿದಿದ್ದಾರೆ. ನಂತರ ಇಬ್ಬರನ್ನೂ, ಹಲಸೂರು ಪೊಲೀಸರಿಗೆ ಒಪ್ಪಿಸಿದ್ದಾರೆ.  

ನಟ ರಘು ಭಟ್ ಅವರು, ಅನ್ವೇಷಿ, ಎಂಎಂಸಿಎಚ್ ಹಾಗೂ ಲವ್ ಯೂ 2 ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿದ್ದು, ನಿಜ ಜೀವನದಲ್ಲೂ ದರೋಡೆಕೋರರನ್ನು ಹಿಡಿದು ಸಾರ್ಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT