ಭರತ-ಬಾಹುಬಲಿ 
ಸಿನಿಮಾ ಸುದ್ದಿ

ಭರತ-ಬಾಹುಬಲಿಯಲ್ಲಿ ಮಂಜು ಮಾಂಡವ್ಯ ರಂಗು ರಂಗಿನ ಸಾಂಗು

ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಕಾಂಬಿನೇಷನ್​ನಲ್ಲಿ ‘ಶ್ರೀ ಭರತ ಬಾಹುಬಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯಹಾಡೊಂದಕ್ಕೆ ಹಿನ್ನೆಲೆ ಗಾಯನ ನೀಡಿದ್ದಾರೆ. 

ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಕಾಂಬಿನೇಷನ್​ನಲ್ಲಿ ‘ಶ್ರೀ ಭರತ ಬಾಹುಬಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಮಂಜು ಮಾಂಡವ್ಯಹಾಡೊಂದಕ್ಕೆ ಹಿನ್ನೆಲೆ ಗಾಯನ ನೀಡಿದ್ದಾರೆ. 

ಈ ಹಾಡಿನಲ್ಲಿ ನಟಿ ಶ್ರುತಿ ಪ್ರಕಾಶ್ ಹೆಜ್ಜೆ ಹಾಕಿದ್ದಾರೆ. ಅವರಿಗೆ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಸಾಥ್ ನೀಡಿದ್ದಾರೆ.

ಈ ಚಿತ್ರದ ನಿರ್ದೇಶಕ, ನಿರ್ಮಾಪಕರೂ ಇವರೇ ಆಗಿರುವುದರಿಂದ ಅಷ್ಟೇ ಕಾಳಜಿಯಿಂದಲೇ ಸಿನಿಮಾ ಮಾಡಿ ಮುಗಿಸಿ ಈಗ ಹಾಡಿನ ಮೂಲಕ ಆಗಮಿಸಿದ್ದಾರೆ. 

ಈ ಗೀತೆಗೆ ಮಂಜು ಮಾಂಡವ್ಯ ಸಾಹಿತ್ಯ ಬರೆದಿರುವ ಜೊತೆಗೆ ಗಾಯಕಿ ಮೈತ್ರಿ ಅಯ್ಯರ್ ಜತೆಗೆ ಗಾಯಕನಾಗಿಯೂ ಮಂಜು ಧ್ವನಿ ನೀಡಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದು, ’ಕೆಜಿಎಫ್’ ಸಿನಿಮಾಕ್ಕೆ ಕಲಾ ನಿರ್ದೇಶನ ಮಾಡಿದ್ದ ಶಿವಕುಮಾರ್ ‘ಭರತ ಬಾಹುಬಲಿ’ ಚಿತ್ರದ ಗೀತೆಗೆ ಕಲರ್​ಫುಲ್ ಸೆಟ್ ನಿರ್ವಿುಸಿದ್ದಾರೆ. 

ಒಟ್ಟು ಐದು ದಿನಗಳ ಕಾಲ ಈ ಹಾಡನ್ನು ಚಿತ್ರೀಕರಿಸಲಾಗಿದ್ದು, ಪರವೀಶ್ ಕೆ ಛಾಯಾಗ್ರಹಣ ನಿಭಾಯಿಸಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ಸಾರಾ ಹರೀಶ್ ಮಂಜುಗೆ ಜೋಡಿಯಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT