ಪುನೀತ್ ರಾಜ್ ಕುಮಾರ್, ಪವನ್ ಒಡೆಯರ್ 
ಸಿನಿಮಾ ಸುದ್ದಿ

'ನಟ ಸಾರ್ವಭೌಮ' ಚಿತ್ರೀಕರಣ ವೇಳೆ ಪ್ರತಿಯೊಬ್ಬರೂ ಅತ್ಯುತ್ಸಾಹದಿಂದ ಕೆಲಸ: ಪವನ್ ಒಡೆಯರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಕೆಲಸ ಮಾಡುವುದೇ ಒಂದು ರೀತಿಯ ಖುಷಿಯಾಗುತ್ತಿರುತ್ತದೆ ಎಂದು ನಟಸಾರ್ವಭೌಮ ಚಿತ್ರ ನಿರ್ದೇಶಕ ಪವನ್ ಒಡೆಯರ್ ಹೇಳಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ಅವರೊಂದಿಗೆ ಕೆಲಸ ಮಾಡುವುದೇ ಒಂದು ರೀತಿಯ ಖುಷಿಯಾಗುತ್ತಿರುತ್ತದೆ ಎಂದು ನಟಸಾರ್ವಭೌಮ ಚಿತ್ರ ನಿರ್ದೇಶಕ ಪವನ್ ಒಡೆಯರ್ ಹೇಳಿದ್ದಾರೆ.

ರಣವಿಕ್ರಮದಂತಹ ಹಿಟ್ ಚಿತ್ರ ನೀಡಿದ ಪವನ್ ಒಡೆಯರ್ ಹಾಗೂ ಪುನೀತ್ ಕಾಂಬಿನೇಷ್ ನಲ್ಲಿ ನಟ ಸಾರ್ವಭೌಮ ಇದೇ ತಿಂಗಳ 7 ರಂದು ತೆರೆಗೆ ಬರುತ್ತಿದ್ದು, ಈ  ಚಿತ್ರದಲ್ಲಿ ಸೆಂಟಿಮೆಂಟ್ಸ್, ದ್ವೇಷ, ಹಾಸ್ಯ, ಪ್ರೀತಿ ಹಾಗೂ ಭಾವನೆ ಎಲ್ಲವೂ ಮಿತವಾಗಿ ಸಂಮ್ಮಿಳಿತವಾಗಿದೆ ಎಂದು ಪವನ್  ಒಡೆಯರ್ ತಿಳಿಸಿದ್ದಾರೆ.

ಆದಾಗ್ಯೂ, ಚಿತ್ರಕಥೆ, ಸಂಭಾಷಣೆ, ನಿರೂಪಣೆ, ತಾರಾಗಣ ಪ್ರತಿಯೊಂದು ಸಿನಿಮಾದಲ್ಲೂ ಬೇರೆ ಬೇರೆಯಾಗಿರುತ್ತದೆ ಎಂಬುದನ್ನು ಅವರು ನಂಬಿದ್ದಾರೆ.

ಗೂಗ್ಲಿ- ಯಶ್, ರಣವಿಕ್ರಮ- ಪುನೀತ್, ಗೋವಿಂದಾಯ ನಮಃ- ಕೋಮಲ್, ಜೆಸ್ಸಿ- ಧನಂಜಯ್ ಮತ್ತು ನಟರಾಜ ಸರ್ವೀಸ್ ಸಿನಿಮಾದಲ್ಲಿ ಶರಣ್ ಅವರನ್ನು ಬೇರೆ ಬೇರೆ ರೀತಿಯಲ್ಲಿ ತೋರಿಸಲಾಗಿದೆ. ಈಗ ಮತ್ತೊಂದು ಚಿತ್ರದಲ್ಲಿ ಪುನೀತ್ ಅವರನ್ನು ವಿಭಿನ್ನ ರೀತಿಯಲ್ಲಿ ತೋರಿಸಲಾಗುತ್ತಿದೆ ಎನ್ನುತ್ತಾರೆ.

 ಜನಾರ್ಧನ್ ಮಹರ್ಷಿ ಧೀರ್ಘ ಕಾಲದಿಂದ ರಚಿಸಿದ  ಕಥೆಗೆ ಕೆಲ ಬದಲಾವಣೆ ಮಾಡಿ ಚಿತ್ರಕಥೆ ಸೃಷ್ಟಿಸಿದ್ದು, ಹೊಸ ಕಥೆ, ಪಾತ್ರ ವಿಶೇಷವಾಗಿ ಪುನೀತ್ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಪವನ್ ಒಡೆಯರ್ ಹೇಳಿದ್ದಾರೆ.

ಪುನೀತ್ ರಾಜ್ ಕುಮಾರ್ ನಿರಂತರವಾಗಿ ಮಾಸ್ ಹಿರೋ ಅಲ್ಲ.  ಅವರೊಬ್ಬ ಸಂಪೂರ್ಣ ಪ್ಯಾಕೇಜ್ ಇದ್ದ ಹಾಗೆ. ತೆರೆಯ ಮೇಲೆ ಚೆನ್ನಾಗಿ ಹೊಡೆಯಬಲ್ಲರೂ, ಅದೇ ರೀತಿಯಲ್ಲಿ ಚೆನ್ನಾಗಿ ನೃತ್ಯ ಮಾಡಬಲ್ಲರು, ಈ ಚಿತ್ರದಲ್ಲಿ ಅವರು ಪೋಟೋಜರ್ನಲಿಸ್ಟ್ ಆಗಿ ಕಾಣಿಸಿಕೊಂಡಿದ್ದಾರೆ.  ಅವರ ಅತ್ಸುತ್ಸಾಹ ಮತ್ತೊಂದು ಪೂರಕ ಅಂಶವಾಗಿದೆ ಎಂದಿದ್ದಾರೆ.

ನಟ ಸಾರ್ವಭೌಮ ಚಿತ್ರೀಕರಣ ವೇಳೆಯಲ್ಲಿ ಪ್ರತಿಯೊಬ್ಬರು ಅತ್ಯುತ್ಸಾಹದಿಂದ ಕೆಲಸ ಮಾಡಿದರು. ಎಲ್ಲ ತಂತ್ರಜ್ಞರು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಬ್ಯಾನರ್ ಅಡಿಯಲ್ಲಿ ಅನುಪಮ ಪರಮೇಶ್ವರನ್ ಮತ್ತು ರಚಿತಾರಾಮ್ ಅವರೊಂದಿಗೆ ಮೊದಲ ಬಾರಿಗೆ ಕೆಲಸ ಮಾಡಿದ್ದಾಗಿ ಪವನ್ ಒಡೆಯರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT