ಸುದೀಪ್ 
ಸಿನಿಮಾ ಸುದ್ದಿ

ನಟ ಸುದೀಪ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ!

ಮಾರ್ಚ್ 26ರಕ್ಕಿಂತ ಮುಂಚಿತವಾಗಿ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ ಎರಡನೇ ಜೂಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಚಿಕ್ಕಮಗಳೂರು: ಮಾರ್ಚ್ 26ರಕ್ಕಿಂತ ಮುಂಚಿತವಾಗಿ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ  ಎರಡನೇ ಜೂಡಿಷಿಯಲ್ ಮ್ಯಾಜಿಸ್ಟ್ರೇಟ್  ಪ್ರಥಮ ದರ್ಜೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ವಾರಸುದಾರ ಟಿವಿ ಧಾರಾವಾಹಿ ಶೂಟಿಂಗ್  ಸಂದರ್ಭದಲ್ಲಿ  ಕಾಫಿ ಎಸ್ಟೇಟ್ ನಲ್ಲಿ ವರದಿಯಾದ ಘಟನೆಯೊಂದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಧಾರಾವಾಹಿಯ ಕಾರ್ಯಕಾರಿ ನಿರ್ಮಾಪಕರಾದ ಸುದೀಪ್ ಹಾಗೂ ಮಹೇಶ್ ವಿರುದ್ಧ
ಫಾರ್ಮ್ ಹೌಸ್  ಮಾಲೀಕ ದೀಪಕ್  ಮಯೂರು, ದೂರು ದಾಖಲಿಸಿದ್ದರು.

ಚಿಕ್ಕಗಳೂರಿನ ಬೈಗೂರು ಗ್ರಾಮದಲ್ಲಿರುವ ಕಾಫಿ ಎಸ್ಟೇಟ್  ನಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಚಿತ್ರೀಕರಣಕ್ಕಾಗಿ ಕಾಫಿ ಸಸ್ಯಗಳನ್ನು ಕಿತ್ತು ಹಾಕಿದ ಸ್ಥಳದಲ್ಲಿ ಕಟ್ಟಡವನ್ನು ನಿರ್ಮಿಸಿಕೊಡಲಾಗುವುದು ಎಂಬ ಷರತ್ತಿನ ಮೇರೆಗೆ  ಚಿತ್ರೀಕರಣಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಆದರೆ, ಚಿತ್ರೀಕರಣ ನಂತರ ಸುದೀಪ್ ಷರತ್ತನ್ನು ಪೂರ್ಣಗೊಳಿಸಿಲ್ಲ ಎಂದು ಎಸ್ಟೇಟ್ ಮಾಲೀಕ ಮಯೂರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT