ಸುದೀಪ್ 
ಸಿನಿಮಾ ಸುದ್ದಿ

ನಟ ಸುದೀಪ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ!

ಮಾರ್ಚ್ 26ರಕ್ಕಿಂತ ಮುಂಚಿತವಾಗಿ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ ಎರಡನೇ ಜೂಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಚಿಕ್ಕಮಗಳೂರು: ಮಾರ್ಚ್ 26ರಕ್ಕಿಂತ ಮುಂಚಿತವಾಗಿ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ  ಎರಡನೇ ಜೂಡಿಷಿಯಲ್ ಮ್ಯಾಜಿಸ್ಟ್ರೇಟ್  ಪ್ರಥಮ ದರ್ಜೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ವಾರಸುದಾರ ಟಿವಿ ಧಾರಾವಾಹಿ ಶೂಟಿಂಗ್  ಸಂದರ್ಭದಲ್ಲಿ  ಕಾಫಿ ಎಸ್ಟೇಟ್ ನಲ್ಲಿ ವರದಿಯಾದ ಘಟನೆಯೊಂದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಧಾರಾವಾಹಿಯ ಕಾರ್ಯಕಾರಿ ನಿರ್ಮಾಪಕರಾದ ಸುದೀಪ್ ಹಾಗೂ ಮಹೇಶ್ ವಿರುದ್ಧ
ಫಾರ್ಮ್ ಹೌಸ್  ಮಾಲೀಕ ದೀಪಕ್  ಮಯೂರು, ದೂರು ದಾಖಲಿಸಿದ್ದರು.

ಚಿಕ್ಕಗಳೂರಿನ ಬೈಗೂರು ಗ್ರಾಮದಲ್ಲಿರುವ ಕಾಫಿ ಎಸ್ಟೇಟ್  ನಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಚಿತ್ರೀಕರಣಕ್ಕಾಗಿ ಕಾಫಿ ಸಸ್ಯಗಳನ್ನು ಕಿತ್ತು ಹಾಕಿದ ಸ್ಥಳದಲ್ಲಿ ಕಟ್ಟಡವನ್ನು ನಿರ್ಮಿಸಿಕೊಡಲಾಗುವುದು ಎಂಬ ಷರತ್ತಿನ ಮೇರೆಗೆ  ಚಿತ್ರೀಕರಣಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಆದರೆ, ಚಿತ್ರೀಕರಣ ನಂತರ ಸುದೀಪ್ ಷರತ್ತನ್ನು ಪೂರ್ಣಗೊಳಿಸಿಲ್ಲ ಎಂದು ಎಸ್ಟೇಟ್ ಮಾಲೀಕ ಮಯೂರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT