ರಜನಿಕಾಂತ್ ಮತ್ತು ಕಮಲ್ ಹಾಸನ್ 
ಸಿನಿಮಾ ಸುದ್ದಿ

ಕಮಲ್ ಹಾಸನ್ ಭೇಟಿ ಮಾಡಿ ಪುತ್ರಿ ವಿವಾಹಕ್ಕೆ ಆಹ್ವಾನಿಸಿದ 'ತಲೈವಾ'

ಹಿಂದೊಮ್ಮೆ ಸಿನಿಮಾ ಕ್ಷೇತ್ರದಲ್ಲಿ ಸ್ಪರ್ಧಿಗಳಾಗಿದ್ದ ಇಂದು ರಾಜಕೀಯಕ್ಕೆ ಧುಮುಕಿರುವ ತಮಿಳಿನ ಸೂಪರ್ ...

ಚೆನ್ನೈ: ಹಿಂದೊಮ್ಮೆ ಸಿನಿಮಾ ಕ್ಷೇತ್ರದಲ್ಲಿ ಸ್ಪರ್ಧಿಗಳಾಗಿದ್ದ ಇಂದು ರಾಜಕೀಯಕ್ಕೆ ಧುಮುಕಿರುವ ತಮಿಳಿನ ಸೂಪರ್ ಸ್ಟಾರ್ ಗಳಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ನಿನ್ನೆ ಚೆನ್ನೈಯಲ್ಲಿ ಭೇಟಿಯಾಗಿದ್ದಾರೆ.

ಇಬ್ಬರೂ ಪರಸ್ಪರ ಭೇಟಿಯಾದಾಗ ಆಲಂಗಿಸಿ ಆತ್ಮೀಯತೆಯನ್ನು ತೋರಿಸಿಕೊಂಡರು. ರಜನಿಕಾಂತ್ ಅವರ ಮಗಳು ಸೌಂದರ್ಯ ಅವರ ವಿವಾಹ ಇದೇ 11ರಂದು ಚೆನ್ನೈಯಲ್ಲಿ ನಡೆಯಲಿದ್ದು ಅದಕ್ಕೆ ಆಹ್ವಾನಿಸಲು ರಜನಿಕಾಂತ್ ಕಮಲ್ ಹಾಸನ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿಗಳು ಹೇಳುತ್ತವೆ.



ಡಿಸೆಂಬರ್ 17ರಂದು ರಾಜಕೀಯಕ್ಕೆ ಪ್ರವೇಶಿಸಿದ ತಲೈವಾರ್ ಇನ್ನೂ ತಮ್ಮ ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಿಸಿಕೊಂಡಿಲ್ಲ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಯೇ ಇಲ್ಲವೇ ಎಂಬುದು ಖಚಿತವಾಗಿಲ್ಲ. ಕಮಲ್ ಹಾಸನ್ ಅವರು ತಮಿಳುನಾಡು ಮತ್ತು ಪುದುಚೆರಿಯಲ್ಲಿ ತಮ್ಮ ಮಕ್ಕಳ್ ನಿದಿ ಮಯಾಮ್(ಎಂಎನ್ಎಂ) ಪಕ್ಷ 40 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ. ಅಲ್ಲದೆ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಆದರೆ ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ಎಂಬುದನ್ನು ಕಮಲ್ ಹಾಸನ್ ಬಹಿರಂಗಪಡಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT