ಮಂಡ್ಯ: ಭಾರತೀಯ ಯೋಧರ ಬಲಿದಾನಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ ಎಂದು ನಟ ಕಮ್ ರಾಜಕಾರಣಿ ಪ್ರಕಾಶ್ ರೈ ಹೇಳಿದ್ದಾರೆ.
ಭಯೋತ್ಪಾದಕರ ಪೈಶಾಚಿಕ ಕೃತ್ಯದಲ್ಲಿ ಯೋಧರು ಹತ್ಯೆಗೀಡಾಗಿರುವುದು ನಿಜಕ್ಕೂ ಅಘಾತಕಾರಿ. ಮಗನ ಅಗಲಿಕೆ ನೋವು ಸಹಿಸಿಕೊಳ್ಳುವುದು ಕಷ್ಟ. ಸ್ವಾರ್ಥಕಲ್ಲ ದೇಶ ಸೇವೆಗಾಗಿ ಮಗನನ್ನು ಮೀಸಲಿಟ್ಟಿದ್ದರು. ಇಂಥ ಕುಟುಂಬದ ಸಮಸ್ಯೆಗಳನ್ನು ತೀರಿಸುತ್ತೇನೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.
ಹುತಾತ್ಮ ಯೋಧ ಗುರು ಅವರ ನಿವಾಸಕ್ಕೆ ಆಗಮಿಸಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು ಗುರು ಅವರ ಅಗಲಿಕೆಯಿಂದ ಕುಟುಂಬ ಈಗ ಸಂಕಷ್ಟದಲ್ಲಿದೆ. ನಿಮ್ಮ ಕಷ್ಟಗಳಲ್ಲಿ ಭಾಗಿಯಾಗುತ್ತೇನೆ ಎಂದು ಭರವಸೆ ನೀಡಿದರು. ಉಗ್ರರ ಇಂಥ ಹೇಯ ಕೃತ್ಯವನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕು ಎಂದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos