ಶಾರುಖ್ ಖಾನ್ 
ಸಿನಿಮಾ ಸುದ್ದಿ

ಪಾಕ್ ಕಲಾವಿದರನ್ನು ನಿಷೇಧಿಸಿದರೆ ದೇಶ ಬಿಡ್ತೀನಿ: ಶಾರುಖ್ ಖಾನ್ ಹೇಳಿಕೆಯ ವೈರಲ್ ಸುದ್ದಿ ಸುಳ್ಳು!

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿ ಬಳಿಕ ಕೇಂದ್ರ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತ್ತು.

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿ ಬಳಿಕ ಕೇಂದ್ರ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತ್ತು. ಇನ್ನು ಪಾಕ್ ಕಲಾವಿದರಿಗೆ ನಿಷೇಧ ಹೇರಲಾಗಿತ್ತು. ಇದಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ತಾವು ದೇಶ ಬಿಡುವುದಾಗಿ ಹೇಳಿದ್ದಾರೆ ಎಂಬ ಸುದ್ದಿಗಳು ವರದಿಯಾಗುತ್ತಿವೆ.
ಭಾರತದಲ್ಲಿ ಪಾಕಿಸ್ತಾನದ ಕಲಾವಿದರನ್ನು ನಿಷೇಧಿಸಿದರೆ ತಾವು ಭಾರತ ಬಿಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆಂಬ ಸಂದೇಶ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಿಜೆಪಿ ಸೋಷಿಯಲ್ ಮೀಡಿಯಾ, ಸುಧೀರ್ ಚೌಧರಿ, ಭಾಜಪ ಮಿಷನ್ 2019, ಮೋದಿ ಮಿಷನ್ 2019 ಸೇರಿದಂತೆ ಅನೇಕ ಫೇಸ್ ಬುಕ್ ಪೇಜ್ ಗಳು ಈ ಸಂದೇಶವನ್ನು ಶೇರ್ ಮಾಡಿವೆ. ಕೇವಲ ಫೇಸ್ ಬುಕ್ ನಲ್ಲಿ ಮಾತ್ರವಲ್ಲದೆ ಟ್ವೀಟರ್, ವ್ಯಾಟ್ಸ್ ಆ್ಯಪ್ ಗಳಲ್ಲೂ ವೈರಲ್ ಆಗಿದೆ.
ಶಾರುಖ್ ಖಾನ್ ಈ ಹೇಳಿಕೆ ನೀಡಿದ್ದರಾ ಎಂದು ಪರಿಶೀಲಿಸಿದಾಗ ಇದ್ದೊಂದು ಸುಳ್ಳುಸುದ್ದಿ ಎಂಬುದು ತಿಳಿದುಬಂದಿದೆ. ವಾಸ್ತವವಾಗಿ ಖಾನ್ ಈ ರೀತಿಯ ಯಾವ ಹೇಳಿಕೆಯನ್ನು ನೀಡಿಲ್ಲ. ಅಲ್ಲದೆ ಈ ಬಗ್ಗೆ ಯಾವುದೇ ಮುಖ್ಯವಾಹಿನಿಯ ಮಾಧ್ಯಮಗಳೂ ವರದಿ ಮಾಡಿಲ್ಲ.
ಅಖಿಲ್ ಭಾರತ ಚಲನಚಿತ್ರ ಕಾರ್ಮಿಕ ಒಕ್ಕೂಟ(ಎಐಸಿಡಬ್ಲ್ಯೂಎ) ಫೆಬ್ರವರಿ 18ರಂದು ಪಾಕಿಸ್ತಾನ ಕಲಾವಿದರಿಗೆ ನಿಷೇಧ ಹೇರಿತ್ತು. ಈ ಬಗ್ಗೆ ಶಾರುಕ್ ಖಾನ್ ಯಾವುದೇ ಹೇಳಿಕೆ ನೀಡಿಲ್ಲ. ಹಾಗಾಗಿ ಈ ಸುದ್ದಿ ಸುಳ್ಳು ಎಂಬುದು ಸ್ಪಷ್ಟ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT