ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಮಹೇಶ್ ಬಾಬು ಚಿತ್ರವನ್ನೇ ತೆಗಳಿದ್ದ ತೆಲಂಗಾಣ ಸಿಎಂ ಪುತ್ರ 'ಕೆಜಿಎಫ್' ನೋಡಿ ಹೇಳಿದ್ದೇನು ಗೊತ್ತಾ?

ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರ ಹಾಗೂ ತೆಲಂಗಾಣ ಸಚಿವ ಕೆಟಿ ರಾಮಾರಾವ್ ಅವರು ನಟ ಯಶ್ ಅಭಿನಯದ ಕೆಜಿಎಫ್ ಚಿತ್ರ ವೀಕ್ಷಿಸಿ ಚಿತ್ರ ತಂಡದ ಪರಿಶ್ರಮಕ್ಕೆ ಮಾರು ಹೋಗಿದ್ದಾರೆ.

ಹೈದರಾಬಾದ್: ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರ ಹಾಗೂ ತೆಲಂಗಾಣ ಸಚಿವ ಕೆಟಿ ರಾಮಾರಾವ್ ಅವರು ನಟ ಯಶ್ ಅಭಿನಯದ ಕೆಜಿಎಫ್ ಚಿತ್ರ ವೀಕ್ಷಿಸಿ ಚಿತ್ರ ತಂಡದ ಪರಿಶ್ರಮಕ್ಕೆ ಮಾರು ಹೋಗಿದ್ದಾರೆ.
ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ಕೆಟಿಆರ್ ಎಂದೇ ಖ್ಯಾತಿ ಗಳಿಸಿರುವ ಕೆಟಿ ರಾಮಾರಾವ್ ಅವರು, ಈ ಬಗ್ಗೆ ಸ್ವತಃ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನಾನು ತಡವಾಗಿ ಚಿತ್ರ ನೋಡಿರ ಬಹುದು. ಆದರೆ ಒಂದು ಒಳ್ಳೆಯ ಚಿತ್ರ ನೋಡಿದ ಖುಷಿಯಿದೆ. ತಾಂತ್ರಿಕವಾಗಿ ಕೆಜಿಎಫ್ ಚಿತ್ರ ಉನ್ನತ ಮಟ್ಟದಲ್ಲಿದ್ದು, ಚಿತ್ರಕಥೆಯ ನಿರೂಪಣೆ ಮತ್ತು ಶೈಲಿ ಹೊಸದಾಗಿದೆ. ಪ್ರಶಾಂತ್ ನೀಲ್ ನಿರ್ದೇಶನ ಅತ್ಯುತ್ತಮವಾಗಿದ್ದು, ಇಡೀ ಚಿತ್ರಕ್ಕೆ ಹಿನ್ನಲೆ ಸಂಗೀತ ಬೆನ್ನೆಲುಬಾಗಿದೆ. ಅಂತೆಯೇ ರಾಕಿಂಗ್ ಸ್ಟಾರ್ ಯಶ್ ಅಭಿನಯ ಕೂಡ ರಾಕಿಂಗ್ ಆಗಿದೆ ಎಂದು ಚಿತ್ರತಂಡದ ಬೆನ್ನು ತಟ್ಟಿದ್ದಾರೆ.
ಇನ್ನು ಈ ಹಿಂದೆ ಇದೇ ಕೆಟಿಆರ್ ತಮ್ಮ ಆಪ್ತ ಮಿತ್ರ ಮತ್ತು ತೆಲುಗು ಸಿನಿಮಾ ರಂಗದ ಸೂಪರ್ ಸ್ಚಾರ್ ಮಹೇಶ್ ಬಾಬು ಅವರ ಚಿತ್ರವನ್ನೇ ಟೀಕಿಸಿ ಸುದ್ದಿಯಾಗಿದ್ದರು. ಮಹೇಶ್ ಬಾಬು ಅಭಿನಯದ ಆಗಡು ಚಿತ್ರ ಬಿಡುಗಡೆ ಬಳಿಕ ಮಹೇಶ್ ತಮ್ಮ ಮಿತ್ರ ಕೆಟಿಆರ್ ಗೆ ಕರೆ ಮಾಡಿ ಚಿತ್ರದ ಕುರಿತು ಪ್ರತಿಕ್ರಿಯೆ ಕೇಳಿದ್ದರಂತೆ. ಆಗ ಕೆಟಿಆರ್ ಇಂತಹ ಕೆಟ್ಟ ಚಿತ್ರ ಮಾಡಬೇಡ ಎಂದು ನೇರವಾಗಿಯೇ ಮಹೇಶ್ ಗೆ ಕಿವಿಮಾತು ಹೇಳಿದ್ದರಂತೆ. ಈ ವಿಚಾರವನ್ನು ಸ್ವತಃ ಮಹೇಶ್ ಬಾಬು ಅವರೇ ತಮ್ಮ ಭರತ್ ಅನೆ ನೇನು ಚಿತ್ರದ ಪ್ರಚಾರದ ವೇಳೆ ಬಹಿರಂಗ ಪಡಿಸಿದ್ದರು.
ಒಟ್ಟಾರೆ ಕೆಜಿಎಫ್ ಚಾಪ್ಟರ್ 1 ಸಕ್ಸಸ್ ಬೆನ್ನಲ್ಲೇ ಚಿತ್ರತಂಡ ಚಾಪ್ಟರ್ 2ಗೆ ತಯಾರಿ ನಡೆಸಿಕೊಂಡಿದ್ದು, ಚಾಪ್ಟರ್ 2 ಇನ್ನೂ ಉತ್ತಮವಾಗಿರಲಿದೆ ಎಂದು ಅಭಿಮಾನಿಗಳು ಆಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!