ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಮೇರು ನಟಿ ಬಿ.ಸರೋಜಾದೇವಿಗೆ ತೆಲುಗು ಅಭಿಮಾನಿಗಳಿಂದ “ವಿಶ್ವ ನಟ ಸಾಮ್ರಾಜ್ಞಿ” ಪ್ರಶಸ್ತಿ

ಹಿರಿಯ ನಟಿ ಬಿ.ಸರೋಜಾ ದೇವಿ ಅವರಿಗೆ ಮಾರ್ಚ್ 4ರಂದು ವಿಶಾಖಪಟ್ಟಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ‘ವಿಶ್ವ ನಟ ಸಾಮ್ರಾಜ್ಞಿ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಹೈದ್ರಾಬಾದ್:  ದಕ್ಷಿಣ ಭಾರತ ಚಿತ್ರರಂಗದ ಸುಪ್ರಸಿದ್ಧ ಹಿರಿಯ ನಟಿ ಬಿ.ಸರೋಜಾ ದೇವಿ ಅವರಿಗೆ ಮಾರ್ಚ್ 4ರಂದು  ವಿಶಾಖಪಟ್ಟಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ‘ವಿಶ್ವ ನಟ ಸಾಮ್ರಾಜ್ಞಿ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಹಾಗೂ ಚಲನಚಿತ್ರ ನಿರ್ಮಾಪಕ ಟಿ. ಸುಬ್ಬರಾಮಿರೆಡ್ಡಿ ಪ್ರಕಟಿಸಿದ್ದಾರೆ.
ಮಹಾಶಿವರಾತ್ರಿಯ ಅಂಗವಾಗಿ ವಿಶಾಖಪಟ್ಟಣದ  ರಾಮಕೃಷ್ಣ ಕಡಲ ಕಿನಾರೆಯಲ್ಲಿ ಟಿಎಸ್ ಆರ್ ಕಲಾಪರಿಷತ್ ಆಯೋಜಿಸಿರುವ ವಿಶೇಷ  ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಿ. ಸರೋಜಾದೇವಿ ಸನ್ಮಾನ ಕಾರ್ಯಕ್ರಮದಲ್ಲಿ ಹಿರಿಯ ನಟಿಯರಾದ ಜಮುನ, ವಾಣಿಶ್ರೀ, ಗೀತಾಂಜಲಿ, ಮೀನಾ, ಗಾಯಕಿ ಪಿ.ಸುಶೀಲಾ  ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಕನ್ನಡ ನಾಡಿನ ಈ ಕಲಾವಿದೆ ತೆಲುಗು ಪ್ರೇಕ್ಷಕರ  ಹೃದಯಗಳಲ್ಲಿ ಮನೆ ಮಾಡಿದ್ದಾರೆ ಎಂದು ಹೇಳಿದ್ದಾರೆ,
ಎನ್ ಟಿ ರಾಮರಾವ್ ನಟಿಸಿರುವ ಪಾಂಡುರಂಗ ಮಹಾತ್ಯಂ ಚಿತ್ರದ ಮೂಲಕ  ತೆಲುಗು ಚಿತ್ರರಂಗ ಪ್ರವೇಶಿಸಿದ ಸರೋಜಾದೇವಿ, ನಂತರ ಎನ್ ಟಿಆರ್ ಅವರೊಂದಿಗೆ ಸೀತರಾಮ ಕಲ್ಯಾಣಂ, ಜಗದೇಕವೀರುನಿ ಕಥ, ಧಾನ ಶೂರ ವೀರ ಕರ್ಣ ಚಿತ್ರಗಳಂತಹ ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದರು.
ಅಕ್ಕಿನೇನಿ ನಾಗೇಶ್ವರರಾವ್ ಅವರೊಂದಿಗೆ ಪೆಳ್ಳಿಕಾನುಕ, ಆತ್ಮಬಲಂ, ಅಮರಶಿಲ್ಪಿ ಜಕ್ಕನ್ನ ನಂತಹ ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿದ್ದರು. ಮಾತೃಭಾಷೆ ಕನ್ನಡವಲ್ಲದೆ, ತಮಿಳು, ಮಲೆಯಾಳಂ, ಹಿಂದಿ ಚಿತ್ರಗಳಲ್ಲೂ ನಟಿಸಿದ್ದರು ಸರೋಜಾ ದೇವಿ ಪದ್ಮಶ್ರೀ, ಪದ್ಮ ವಿಭೂಷಣ ಪುರಸ್ಕಾರಗಳಿಗೂ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದಲ್ಲಿ 'ಪ್ರಜಾಪ್ರಭುತ್ವ ಗಡಿಪಾರು'; ಚುನಾವಣೆ ಮುಕ್ತವಾಗಿರುವುದಿಲ್ಲ: ಯೂನಸ್ ವಿರುದ್ಧ ಮಾಜಿ ಪ್ರಧಾನಿ ಹಸೀನಾ ವಾಗ್ದಾಳಿ

IND vs NZ 2nd T20: ಭಾರತಕ್ಕೆ 7 ವಿಕೆಟ್‌ ಗೆಲುವು

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!

'ವಿಬಿ ಜಿ ರಾಮ್ ಜಿ' ಕಾಯ್ದೆ ಜಾರಿ ಬಗ್ಗೆ NDA ಮಿತ್ರ ಪಕ್ಷ ಆತಂಕ: ರಾಜಕೀಯವಾಗಿ ಮಹತ್ವದ್ದು ಎಂದ ಸಿದ್ದರಾಮಯ್ಯ!

ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್! BMC ಯಲ್ಲಿ ಬದ್ಧವೈರಿಗಳು ಒಂದಾಗುವ ಸಾಧ್ಯತೆ?

SCROLL FOR NEXT