ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಮೇರು ನಟಿ ಬಿ.ಸರೋಜಾದೇವಿಗೆ ತೆಲುಗು ಅಭಿಮಾನಿಗಳಿಂದ “ವಿಶ್ವ ನಟ ಸಾಮ್ರಾಜ್ಞಿ” ಪ್ರಶಸ್ತಿ

ಹಿರಿಯ ನಟಿ ಬಿ.ಸರೋಜಾ ದೇವಿ ಅವರಿಗೆ ಮಾರ್ಚ್ 4ರಂದು ವಿಶಾಖಪಟ್ಟಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ‘ವಿಶ್ವ ನಟ ಸಾಮ್ರಾಜ್ಞಿ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಹೈದ್ರಾಬಾದ್:  ದಕ್ಷಿಣ ಭಾರತ ಚಿತ್ರರಂಗದ ಸುಪ್ರಸಿದ್ಧ ಹಿರಿಯ ನಟಿ ಬಿ.ಸರೋಜಾ ದೇವಿ ಅವರಿಗೆ ಮಾರ್ಚ್ 4ರಂದು  ವಿಶಾಖಪಟ್ಟಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ‘ವಿಶ್ವ ನಟ ಸಾಮ್ರಾಜ್ಞಿ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಹಾಗೂ ಚಲನಚಿತ್ರ ನಿರ್ಮಾಪಕ ಟಿ. ಸುಬ್ಬರಾಮಿರೆಡ್ಡಿ ಪ್ರಕಟಿಸಿದ್ದಾರೆ.
ಮಹಾಶಿವರಾತ್ರಿಯ ಅಂಗವಾಗಿ ವಿಶಾಖಪಟ್ಟಣದ  ರಾಮಕೃಷ್ಣ ಕಡಲ ಕಿನಾರೆಯಲ್ಲಿ ಟಿಎಸ್ ಆರ್ ಕಲಾಪರಿಷತ್ ಆಯೋಜಿಸಿರುವ ವಿಶೇಷ  ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಿ. ಸರೋಜಾದೇವಿ ಸನ್ಮಾನ ಕಾರ್ಯಕ್ರಮದಲ್ಲಿ ಹಿರಿಯ ನಟಿಯರಾದ ಜಮುನ, ವಾಣಿಶ್ರೀ, ಗೀತಾಂಜಲಿ, ಮೀನಾ, ಗಾಯಕಿ ಪಿ.ಸುಶೀಲಾ  ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಕನ್ನಡ ನಾಡಿನ ಈ ಕಲಾವಿದೆ ತೆಲುಗು ಪ್ರೇಕ್ಷಕರ  ಹೃದಯಗಳಲ್ಲಿ ಮನೆ ಮಾಡಿದ್ದಾರೆ ಎಂದು ಹೇಳಿದ್ದಾರೆ,
ಎನ್ ಟಿ ರಾಮರಾವ್ ನಟಿಸಿರುವ ಪಾಂಡುರಂಗ ಮಹಾತ್ಯಂ ಚಿತ್ರದ ಮೂಲಕ  ತೆಲುಗು ಚಿತ್ರರಂಗ ಪ್ರವೇಶಿಸಿದ ಸರೋಜಾದೇವಿ, ನಂತರ ಎನ್ ಟಿಆರ್ ಅವರೊಂದಿಗೆ ಸೀತರಾಮ ಕಲ್ಯಾಣಂ, ಜಗದೇಕವೀರುನಿ ಕಥ, ಧಾನ ಶೂರ ವೀರ ಕರ್ಣ ಚಿತ್ರಗಳಂತಹ ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದರು.
ಅಕ್ಕಿನೇನಿ ನಾಗೇಶ್ವರರಾವ್ ಅವರೊಂದಿಗೆ ಪೆಳ್ಳಿಕಾನುಕ, ಆತ್ಮಬಲಂ, ಅಮರಶಿಲ್ಪಿ ಜಕ್ಕನ್ನ ನಂತಹ ಜನಪ್ರಿಯ ಚಿತ್ರಗಳಲ್ಲಿ ಅಭಿನಯಿಸಿದ್ದರು. ಮಾತೃಭಾಷೆ ಕನ್ನಡವಲ್ಲದೆ, ತಮಿಳು, ಮಲೆಯಾಳಂ, ಹಿಂದಿ ಚಿತ್ರಗಳಲ್ಲೂ ನಟಿಸಿದ್ದರು ಸರೋಜಾ ದೇವಿ ಪದ್ಮಶ್ರೀ, ಪದ್ಮ ವಿಭೂಷಣ ಪುರಸ್ಕಾರಗಳಿಗೂ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

207 ಮೀಟರ್ ಎತ್ತರಕ್ಕೆ ಉಕ್ಕಿದ ಯಮುನೆ; ದೆಹಲಿಯ ತಗ್ಗು ಪ್ರದೇಶ, ಮಾರುಕಟ್ಟೆಗಳು ಜಲಾವೃತ

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ?: ಹಾಸಿಗೆ, ದಿಂಬು ಬೇಡಿಕೆ ತೀರ್ಪು ಸೆ.9ಕ್ಕೆ ಕಾಯ್ದಿರಿಸಿದ ಕೋರ್ಟ್!

VIKRAM-32: ಭಾರತದ ಹೊಸ ಬಾಹ್ಯಾಕಾಶ ದರ್ಜೆಯ ಮೈಕ್ರೋಪ್ರೊಸೆಸರ್; Microchip ಮಹತ್ವ, ವಿಶೇಷತೆ ಏನು? ಇಲ್ಲಿದೆ ಮಾಹಿತಿ!

'DNA ಕಳ್ಳತನ' ಭೀತಿ.. ಚೀನಾದಲ್ಲಿ ಸರ್ವಾಧಿಕಾರಿ Kim Jong-un ಮುಟ್ಟಿದ ಎಲ್ಲ ವಸ್ತುಗಳ ಸ್ವಚ್ಛಗೊಳಿಸಿದ ಸಿಬ್ಬಂದಿ, ಕಾರಣ ಏನು? video

SCROLL FOR NEXT