ವಿಜಯಲಕ್ಷ್ಮಿ 
ಸಿನಿಮಾ ಸುದ್ದಿ

ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ಇಲ್ಲದೆ ಅನಾಥಳಾಗಿದ್ದೇನೆ: ನಟಿ ವಿಜಯಲಕ್ಷ್ಮಿ ಕಣ್ಣೀರು!

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟಿ ವಿಜಯಲಕ್ಷ್ಮಿ ಅವರ ಆರೋಗ್ಯದಲ್ಲಿ ಇದೀಗ ಸ್ವಲ್ಪ ಸುಧಾರಣೆ ಆಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಅವರು ಸಹಾಯಹಸ್ತಕ್ಕಾಗಿ...

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟಿ ವಿಜಯಲಕ್ಷ್ಮಿ ಅವರ ಆರೋಗ್ಯದಲ್ಲಿ ಇದೀಗ ಸ್ವಲ್ಪ ಸುಧಾರಣೆ ಆಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಅವರು ಸಹಾಯಹಸ್ತಕ್ಕಾಗಿ ಕಾದಿದ್ದರು. 
ಇದೀಗ ಆರೋಗ್ಯ ಸ್ವಲ್ಪ ಸುಧಾರಿಸಿದ್ದರಿಂದ ವಿಡಿಯೋ ಮಾಡಿದ್ದ ಅವರು ನಾನು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇಷ್ಟೊಂದು ನೋವು ಅನುಭವಿಸಲು ಅವರಿಬ್ಬರು ಬಿಡುತ್ತಿರಲಿಲ್ಲ. ಅವರಿಲ್ಲದೆ ನಾನು ಅನಾಥೆಯಾಗಿದ್ದೇನೆ ಎಂದು ಕಣ್ಣೀರು ಹಾಕಿದ್ದಾರೆ.
ಇನ್ನು ಕನ್ನಡ ಚಿತ್ರರಂಗದಲ್ಲಿ ಸುದೀಪ್ ಸರ್ ಬಿಟ್ಟು ಬೇರೆ ಯಾರಿಗೂ ಯಾಕೆ ಕರುಣೆ ಬಂದಿಲ್ಲ. ನಾನು ಏನ್ ತಪ್ಪು ಮಾಡಿದ್ದೀನಿ. ಯಾಕೆ ಇಷ್ಟು ಶಿಕ್ಷೆ ಕೊಡುತ್ತಿದ್ದೀರಿ ಎಂದು ವಿಡಿಯೋದಲ್ಲಿ ತಮ್ಮ ನೋವಿನ ಮಾತುಗಳನ್ನು ಹಂಚಿಕೊಂಡಿದ್ದಾರೆ. 
ಸದ್ಯದ ಪರಿಸ್ಥಿತಿಯಲ್ಲಿ ನನ್ನ ಕೈಯಲ್ಲಿ ಕೆಲಸ ಮಾಡುಲು ಸಾಧ್ಯವಾಗುತ್ತಿಲ್ಲ. ನನಗೆ ಸ್ವಂತ ಮನೆಯಿಲ್ಲ. ಬಾಡಿಗೆ ಮನೆಗೆ ಹೋಗಬೇಕೆಂದರೆ ಅಡ್ವಾನ್ಸ್ ಕೊಡಬೇಕು. ಅಷ್ಟು ಹಣ ಕೊಡಲು ನನ್ನ ಬಳಿ ಸಾಧ್ಯವಿಲ್ಲ. ನನಗೆ ಸಹಾಯ ಮಾಡುವುದಾಗಿ ಹೇಳಿದ್ದ ಕೆಲವರು ನಂತರ ನನ್ನ ಫೋನ್ ಕಾಲ್ ರಿಸೀವ್ ಮಾಡುತ್ತಿಲ್ಲ. ಆದರೆ ಸುದೀಪ್ ಯಾರೂ ನನಗೆ ಸಹಾಯ ಮಾಡುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT