ಅದಿತಿ ಪ್ರಭುದೇವ 
ಸಿನಿಮಾ ಸುದ್ದಿ

ನಾನು ಉತ್ತಮವಾದದ್ದನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತೇನೆ: ಅದಿತಿ ಪ್ರಭುದೇವ

ಅದಿತಿ ಪ್ರಭುದೇವ ಕನ್ನಡ ಸಿನಿಮಾ ರಸಿಕರಿಗೆ ಅಪರಿಚಿತರಲ್ಲ, ನಾಗಕನ್ನಿಕೆ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಅದಿತಿ ,...

ಬೆಂಗಳೂರು: ಅದಿತಿ ಪ್ರಭುದೇವ ಕನ್ನಡ ಸಿನಿಮಾ ರಸಿಕರಿಗೆ ಅಪರಿಚಿತರಲ್ಲ, ನಾಗಕನ್ನಿಕೆ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಅದಿತಿ ಹಿರಿತೆರೆಗೆ ಧೈರ್ಯಂ ಸಿನಿಮಾ ಮೂಲಕ 
ಪಾದಾರ್ಪಣೆ ಮಾಡಿದ್ದಾರೆ. 
ಅದಿತಿ ಬಜಾರ್ ಸಿನಿಮಾದಲ್ಲೂ ನಟಿಸಿದ್ದಾರೆ ಚಮಕ್‌' ನಂತರ "ಬಜಾರ್‌' ಎಂಬ ಹೊಸ ಚಿತ್ರವನ್ನು ಸುನಿ ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಅಲ್ಲದೇ ಚಿತ್ರದ ಪೋಸ್ಟರ್, ಹಾಡುಗಳು ಹಾಗೂ ಟ್ರೈಲರ್ ಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದ್ದು, ಇದೀಗ ಚಿತ್ರತಂಡ ಚಿತ್ರದ ಮತ್ತೊಂದು ಟ್ರೈಲರ್ ಬಿಡುಗಡೆ ಮಾಡಿದೆ. ಅಲ್ಲದೆ ಟ್ರೈಲರ್ ನೋಡಿದ ಸಿನಿರಸಿಕರಿಂದ ಬೊಂಬಾಟ್ ಪ್ರತಿಕ್ರಿಯೆ ವ್ಯಕ್ತವಾಗಿದೆ.
"ಪಾರಿವಾಳ ಪ್ರೀತಿಯ ಸಂಕೇತ, ಪಾರಿವಾಳ ಶಾಂತಿಯ ಪ್ರತೀಕ. ಆದರೆ ನಿಮಗೆ ಗೊತ್ತಿಲ್ಲದ ಬೇರೆ ಪಾರಿವಾಳದ ಲೋಕವೊಂದಿದೆ' ಎನ್ನುವ ಡೈಲಾಗ್​ ಮೂಲಕ ಟ್ರೈಲರ್ ಆರಂಭವಾಗುತ್ತದೆ. ನೋಡಲು ಪಕ್ಕಾ ಕಮರ್ಷಿಯಲ್ ಸಿನಿಮಾದಂತೆ ಕಾಣಿಸುತ್ತಿರುವ "ಬಜಾರ್' ಸಿನಿಮಾ ಅಂಡರ್ ವರ್ಲ್ಡ್ ಕಥಾಹಂದರವನ್ನೊಳಗೊಂಡಿದ್ದು, ಈ ಚಿತ್ರದಲ್ಲಿ ಪ್ರೇಮ ಸಂದೇಶ ಸಾರುವ ಪಾರಿವಾಳಕ್ಕೂ ಪ್ರಮುಖ ಪಾತ್ರವಿದೆ.
ಎಂಬಿಎ  ಮತ್ತು ಎಂಜಿನೀಯರ್ ಪದವಿಧರೆಯಾಗಿರುವ ಅದಿತಿ ಸಿನಿಮಾ ರಂಗಕ್ಕೆ ಯಾವುದೇ ತಯಾರಿಲ್ಲದೇ ಪ್ರವೇಶಿಸಿದರು. ಬ್ಯಾಂಕ್ ಮ್ಯಾನೇರ್ ಆಗಲು  ಬಯಸಿದ್ದರು.
ನಾನು ಹಲವಾರು ಆಡಿಶನ್ ಗಳಲ್ಲಿ ಭಾಗಹಿಸಿದ್ದೇನೆ,  ಬಜಾರ್ ನಂತರ  ಹಲವು ಕಥೆಗಳು ಬಂದವು, ಆಪರೇಷನ್ ನಕ್ಷತ್ರ,  ತೋತೋಪುರಿ ಸೇರಿದಂತೆ ಹಲವು ಚಿತ್ರಗಳಿಗೆ ಸಹಿ ಮಾಡಿದ್ದಾರೆ. ನಾನು ಮೊದಲಿಗೆ ಕಥೆ  ಓದುತ್ತೇನೆ, ಕಥೆ ನನ್ನ ಪಾತ್ರಕ್ಕೆ ಒಪ್ಪುತ್ತದೆ ಎಂದಾದರೇ ಮಾತ್ರ ನಾನು ಸಹಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಬಜಾರ್  ಸಿನಿಮಾದಲ್ಲಿ  ಪಾರಿವಾಳಗಳ ಬೆಟ್ಟಿಂಗ್‍ನಲ್ಲಿ ನಡೆಯುವ ಪ್ರೇಮಕಥೆಯನ್ನು ನಿರ್ದೇಶಕರು ಹೇಳಲು ಹೊರಟಿದ್ದಾರೆ. "ಬಜಾರ್‌' ಚಿತ್ರದ ಮೂಲಕ ಧನ್‌ವೀರ್‌ ಎಂಬ ಹೊಸ ನಟನನ್ನು ಸುನಿ ಕನ್ನಡಕ್ಕೆ ಪರಿಚಯಿಸುತ್ತಿದ್ದು, ಧನ್‌ವೀರ್‌ ಎದುರು ನಾಯಕಿಯಾಗಿ "ಧೈರ್ಯಂ'ನ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. "ಬಜಾರ್‌' ಚಿತ್ರವನ್ನು ಭಾರತಿ ಫಿಲಂ ಪ್ರೊಡಕ್ಷನ್ಸ್‌ನಡಿ ತಿಮ್ಮೇಗೌಡ ನಿರ್ಮಿಸುತ್ತಿದ್ದು, ಎಂ.ಎಲ್‌. ಪ್ರಸನ್ನ ಅವರ ಕಥೆಗೆ ಸುನಿ ಚಿತ್ರಕಥೆ ರಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT