ಅಭಿಷೇಕ್ ಮತ್ತು ದರ್ಶನ್ಮ 
ಸಿನಿಮಾ ಸುದ್ದಿ

'ಅಮರ್' ಚಿತ್ರದಲ್ಲಿ ಅಭಿಷೇಕ್ ಜೊತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ

ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ನಟಿಸುತ್ತಿರುವ ಅಮರ್ ಚಿತ್ರವನ್ನು ನಾಗಶೇಖರ್ ನಿರ್ದೇಶಿಸುತ್ತಿದ್ದು, ಸಂದೇಶ್ ನಾಗರಾಜ್ ನಿರ್ಮಾಣ ...

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಅಭಿಷೇಕ್ ನಟಿಸುತ್ತಿರುವ ಅಮರ್ ಚಿತ್ರವನ್ನು ನಾಗಶೇಖರ್ ನಿರ್ದೇಶಿಸುತ್ತಿದ್ದು, ಸಂದೇಶ್ ನಾಗರಾಜ್ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ನಟಿಸಿದ್ದಾರೆ.
ಈಗಾಗಲೇ ದರ್ಶನ್‌ ಹಾಗೂ ಅಭಿಷೇಕ್‌ ಕಾಂಬಿನೇಷನ್‌ನ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ವಿದೇಶದಿಂದ ಮರಳುವ ನಂತರ ಬರುವ ದೃಶ್ಯಗಳನ್ನು ಬೆಳಗ್ಗೆಯಿಂದ ರಾತ್ರಿ 11 ಗಂಟೆವರೆಗೂ ಚಿತ್ರೀಕರಣ ಮಾಡಿದ್ದಾರೆ. ಬೆಂಗಳೂರಿನ ಬೃಹತ್‌ ಬಂಗಲೆ ಹಾಗೂ ದಿ ಕ್ಲಬ್‌ನಲ್ಲಿ ಇದರ ಚಿತ್ರೀಕರಣ ಮಾಡಲಾಗಿದೆ. ಚಿತ್ರದ ನಿರ್ದೇಶಕ ನಾಗಶೇಖರ್‌, ತಮ್ಮ ಕತೆಗೆ ತಕ್ಕಂತೆ ದರ್ಶನ್‌ ಪಾತ್ರವನ್ನು ರೂಪಿಸಿದ್ದಾರೆ. 
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅಂಬರೀಷ್ ತಮ್ಮ ದೊಡ್ಡ ಮಗ ಎಂದೇ ಕರೆಯುತ್ತಿದ್ದರು,  ದರ್ಶನ್ ಕೂಡ ಅಪ್ಪಾಜಿ ಎಂದು ಸಂಬೋಧಿಸುತ್ತಿದ್ದರು. ದರ್ಶನ್ ಅಂಬರೀಷ್ ಅವರ ಕುಟುಂಬದಲ್ಲಿ ಒಬ್ಬರಾಗಿದ್ದಾರೆ, ಹೀಗಾಗಿ ದರ್ಶನ್  ಅಭಿಷೇಕ್ ಅವರ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಅಮರ್ ಸಿನಿಮಾ ಶೂಟಿಂಗ್ ಅಂತಿಮ ಘಟ್ಟ ತಲುಪಿದ್ದು, ಇನ್ನೊಂದು ವಾರದಲ್ಲಿ ಸಿನಿಮಾ ಶೂಟಿಂಗ್ ಪೂರ್ಣಗೊಳ್ಳಲಿದೆ, ಶೀಘ್ರವೇ ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿ ಆರಂಭವಾಗಲಿದೆ,  ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
ದರ್ಶನ್‌ ಗೆಸ್ಟ್‌ ರೋಲ್‌ಗಳಲ್ಲಿ ಕಾಣಿಸಿಕೊಳ್ಳುವುದು ತುಂಬಾ ಅಪರೂಪ. ‘ಚೌಕ’ ಚಿತ್ರದಲ್ಲಿ ನಟಿಸಿದ್ದರು. ಅನಂತರ ಪ್ರಜ್ವಲ್‌ ದೇವರಾಜ್‌ ಅವರಿಗಾಗಿಯೇ ‘ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದಲ್ಲಿ ಭಗತ್‌ ಸಿಂಗ್‌ ಪಾತ್ರ ಮಾಡಿದ್ದರು. ಈಗ ಅಂಬರೀಶ್‌ ಮೇಲಿನ ಪ್ರೀತಿಗಾಗಿ ‘ಅಮರ್‌’ ಚಿತ್ರದಲ್ಲಿ ಉದ್ಯಮಿ ಪಾತ್ರ ಮಾಡಿದ್ದಾರೆ.
ತಂದೆಯ ಅಗಲಿಕೆಯ ನೋವಿನಿಂದ ಚೇರಿಸಿಕೊಂಡು ಶೂಟಿಂಗ್‍ನಲ್ಲಿ ತೊಡಗಿದ್ದ ಅಭಿಷೇಕ್‍ಗೆ ಈಗ ಚಾಲೆಂಜಿಂಗ್ ಸ್ಟಾರ್ ಬಣ್ಣ ಹಚ್ಚಿ ನೋವು ಕಡಿಮೆ ಮಾಡುವ ಪ್ರಯತ್ನ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT