ಪಾಕಿಸ್ತಾನದಲ್ಲಿ ಕೆಜಿಎಫ್ ಹವಾ 
ಸಿನಿಮಾ ಸುದ್ದಿ

ಇತಿಹಾಸ ನಿರ್ಮಿಸಿದ ಕೆಜಿಎಫ್: ಪಾಕ್ ನಲ್ಲೂ ಪ್ರದರ್ಶನ ಕಂಡ ಮೊಟ್ಟ ಮೊದಲ ಕನ್ನಡ ಅವತರಣಿಕೆ ಚಿತ್ರ

ಕನ್ನಡ ಚಿತ್ರರಂಗದಲ್ಲೇ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಹೊಸ ಇತಿಹಾಸ ನಿರ್ಮಿಸಿದ್ದು, ಪಾಕಿಸ್ತಾನದಲ್ಲಿ ಬಿಡುಗಡೆಯಾಗುವ ಮೂಲಕ ಪಾಕಿಸ್ತಾನದಲ್ಲಿ ಬಿಡುಗಡೆಯಾದ ಮೊಟ್ಟ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇಸ್ಲಾಮಾಬಾದ್: ಕನ್ನಡ ಚಿತ್ರರಂಗದಲ್ಲೇ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಹೊಸ ಇತಿಹಾಸ ನಿರ್ಮಿಸಿದ್ದು, ಪಾಕಿಸ್ತಾನದಲ್ಲಿ ಬಿಡುಗಡೆಯಾಗುವ ಮೂಲಕ ಪಾಕಿಸ್ತಾನದಲ್ಲಿ ಬಿಡುಗಡೆಯಾದ ಮೊಟ್ಟ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಪ್ರಪಂಚದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕೆಜಿಎಫ್​ ಸಿನಿಮಾ, ಈಗ  ಪಾಕಿಸ್ತಾನದಲ್ಲೂ ತನ್ನ ಹವಾ ಎಬ್ಬಿಸಿದೆ. ಈ ಮೂಲಕ ಪಾಕಿಸ್ತಾನದಲ್ಲಿ ರಿಲೀಸ್​ ಆದ ಮೊದಲ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಕೆಜಿಎಫ್​ ಪಾತ್ರವಾಗ್ತಿದೆ. ಪಾಕಿಸ್ತಾನದಲ್ಲಿ ಟಿಕೆಟ್​ ಬುಕ್ಕಿಂಗ್​ ಆರಂಭವಾಗಿದ್ದು, ಇಸ್ಲಾಮಾಬಾದ್ ಕ್ಲಬ್ ಟಿಕೆಟ್ ಬುಕ್ಕಿಂಗ್ ಸೈಟ್ ನಲ್ಲಿ ಇಂದಿನಿಂದ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ.
ಇನ್ನು ಪಾಕಿಸ್ತಾನಿಗರಿಗೆ ಭಾರತೀಯ ಸಿನಿಮಾಗಳು ಹೊಸದೇನಲ್ಲ. ಸಾಮಾನ್ಯವಾಗಿ ಹಿಂದಿ ಸಿನಿಮಾಗೆ ದೊಡ್ಡ ಅಭಿಮಾನಿ ಬಳಗ ಪಾಕಿಸ್ತಾನದಲ್ಲಿದೆ. ಪ್ರಮುಖವಾಗಿ ಸಲ್ಮಾನ್‌ಖಾನ್, ಶಾರುಖ್‌ ಖಾನ್ ಸಿನಿಮಾಗಳನ್ನು ಪಾಕಿಸ್ತಾನಿ ಪ್ರಜೆಗಳು ಹೆಚ್ಚು ಇಷ್ಟ ಪಡುತ್ತಾರೆ. ಆದರೆ ಇದೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಪಾಕಿಸ್ತಾನದಲ್ಲಿ ತೆರೆ ಕಂಡಿದೆ. 
ಟ್ರೈಲರ್ ನೋಟಿ ಫಿದಾ ಆಗಿದ್ದ ಪಾಕ್ ಅಭಿಮಾನಿಗಳು
ಇನ್ನು ಕೆಜಿಎಫ್ ಸಿನಿಮಾ ಬಿಡುಗಡೆಗೂ ಮೊದಲೇ ಪಾಕಿಸ್ತಾನದಲ್ಲಿ ಭಾರೀ ಬೇಡಿಕೆ ಸೃಷ್ಟಿಯಾಗಿತ್ತು. ಟ್ರೈಲರ್‌ ನೋಡಿ ದಂಗಾಗಿದ್ದ ಅಲ್ಲಿನ ಜನ ಕೆಜಿಎಫ್‌ ರಿಲೀಸ್ ಗಾಗಿ ಕಾಯುತ್ತಿದ್ದರು. ಅಲ್ಲೂ ಸಿನಿಮಾದ ಮ್ಯೂಸಿಕ್​, ಡೈಲಾಗ್ ಎಲ್ಲವೂ ಟ್ರೆಂಡ್​ ಸೃಷ್ಟಿಸಿದ್ವು. ಪಾಕಿಸ್ತಾನಿ ಯುವಕನೊಬ್ಬ ‘ಕೆಜಿಎಫ್​ ಟ್ರೈಲರ್’ ನೋಡಿ ‘ಇದೊಂದು ಗ್ರೇಟ್​ ಟ್ರೈಲರ್​’..!. ಮಾಮೂಲಿ ಸಲ್ಮಾನ್​ ಖಾನ್​ ಸಿನಿಮಾ ಇದಲ್ಲ. ಸಲ್ಮಾನ್​ ಸಿನಿಮಾಗೂ ಮೀರಿದ ಸಿನಿಮಾ. ನಾನಂತೂ ಖಂಡಿತಾ ಸಿನಿಮಾ ನೋಡ್ತೀನಿ’ ಅಂತಾ ಮನಸಾರೆ ಹೊಗಳಿ ತನ್ನ ಅನಿಸಿಕೆ ವ್ಯಕ್ತಪಡಿಸಿದ್ದ. ಈಗ ಕೆಜಿಎಫ್‌ ಪಾಕಿಸ್ತಾನದಲ್ಲಿ ನಾಗಾಲೋಟ ಮುಂದುವರೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT