ರಜನಿಕಾಂತ್ 
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡದ 'ಪೆಟ್ಟಾ' ಚಿತ್ರದ ಕನ್ನಡ ಆವತರಣಿಗೆ ಬರೋದು ದೌಟು?

ಡಬ್ಬಿಂಗ್ ಚಿತ್ರಗಳಿಗೆ ಕರ್ನಾಟಕದಲ್ಲಿ ಭಾರೀ ವಿರೋಧವಿತ್ತು. ಆದರೆ ಕನ್ನಡದ ಕೆಜಿಎಫ್ ಚಿತ್ರ ಪಂಚ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದ ಬಳಿಕ ಇತರ...

ಡಬ್ಬಿಂಗ್ ಚಿತ್ರಗಳಿಗೆ ಕರ್ನಾಟಕದಲ್ಲಿ ಭಾರೀ ವಿರೋಧವಿತ್ತು. ಆದರೆ ಕನ್ನಡದ ಕೆಜಿಎಫ್ ಚಿತ್ರ ಪಂಚ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದ ಬಳಿಕ ಇತರ ಭಾಷೆಯ ಚಿತ್ರಗಳು ಕನ್ನಡದಲ್ಲಿ ಡಬ್ ಆಗಿ ರಿಲೀಸ್ ಆಗುವ ಸಾಧ್ಯತೆಗಳು ಹೆಚ್ಚಿತ್ತು. ಇನ್ನು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಪೆಟ್ಟಾ ಕನ್ನಡ ಡಬ್ ಚಿತ್ರ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿದ್ದು ಇದೀಗ ಈ ಯೋಜನೆಗೆ ಕೊಂಚ ಹಿನ್ನಡೆಯಾಗಿದೆ.
ಹೌದು, ಕರ್ನಾಟಕದಲ್ಲಿ ಪೆಟ್ಟಾ ಚಿತ್ರದ ವಿತರಣೆ ಮಾಡುತ್ತಿರುವ ಜಾಕ್ ಮಂಜು ಅವರು ಪೆಟ್ಟಾ ಚಿತ್ರದ ಕನ್ನಡದ ಅವತರಣೆಕೆಯಲ್ಲಿ ರಜನಿಕಾಂತ್ ಅವರು ಧ್ವನಿ ನೀಡಲಿದ್ದಾರೆ ಎಂದು ಹೇಳುತ್ತಿದ್ದರು. ಆದರೆ ಇದೀಗ ರಜನಿಕಾಂತ್ ಅವರೇ ಸ್ವತಃ ತಾವು ವಾಯ್ಸ್ ಡಬ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. 
ಸದ್ಯ ರಜನಿಕಾಂತ್ ಅವರು ಯಾವುದೇ ವಿವಾದದಲ್ಲಿ ಸಿಲುಕಿಕೊಳ್ಳಲು ಇಚ್ಛಿಸುತ್ತಿಲ್ಲ. ಡಬ್ಬಿಂಗ್ ಗೆ ಕನ್ನಡಿಗರ ವಿರೋಧವಿದೆ. ಇದರಿಂದಾಗಿ ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡುವ ಯೋಚನೆ ಸಹ ನಾನು ಮಾಡುವುದಿಲ್ಲ. ಇನ್ನು ವಾಯ್ಸ್ ಡಬ್ ಮಾಡುವಂತೆ ನನ್ನನ್ನು ಬಲವಂತ ಮಾಡಬೇಡಿ ಎಂದು ವಿತರಕರಿಗೆ ಖಡಕ್ಕಾಗಿ ಹೇಳಿದ್ದಾರೆ. 
ಇದರಿಂದಾಗಿ ಪೆಟ್ಟಾ ಕನ್ನಡ ಆವತರಣಿಕೆಯ ಚಿತ್ರ ಬಿಡುಗಡೆಯಾಗುವ ಸಂಭವಗಳು ಕಡಿಮೆ ಇದೆ. ಇನ್ನು ವಿತರಕ ಜಾಕ್ ಮಂಜು ಸಹ ಪೆಟ್ಟಾ ಡಬ್ಬಿಂಗ್ ಕುರಿತಂತೆ ಸಂಕ್ರಾಂತಿ ಹಬ್ಬದ ನಂತರ ನಿರ್ಮಾಪಕ ಜೊತೆ ಮಾತನಾಡುತ್ತೇನೆ. ಅಲ್ಲಿಯವರೆಗೂ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT