ದರ್ಶನ್-ಸುದೀಪ್ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಅವಕಾಶ ಸಿಕ್ಕರೆ ದರ್ಶನ್ ಜೊತೆ ಸಿನಿಮಾ ಮಾಡಲು ಸಿದ್ದ; ಕಿಚ್ಚ ಸುದೀಪ್

ಕನ್ನಡ ಚಿತ್ರರಂಗದ ಖ್ಯಾತ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಮಧ್ಯೆ ಇದ್ದ ಸ್ನೇಹ ಎರಡು ವರ್ಷಗಳ ...

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟರಾದ ಕಿಚ್ಚ ಸುದೀಪ್ ಮತ್ತು ದರ್ಶನ್ ಮಧ್ಯೆ ಇದ್ದ ಸ್ನೇಹ ಎರಡು ವರ್ಷಗಳ ಹಿಂದೆ ಮುರಿದು ಬಿದ್ದಾಗ ಅವರ ಅಪಾರ ಅಭಿಮಾನಿಗಳಿಗೆ ನೋವಾಗಿತ್ತು. ತೂಗುದೀಪ ದರ್ಶನ್ ಅವರೇ ಟ್ವಿಟ್ಟರ್ ನಲ್ಲಿ, ಇನ್ನು ನಾವಿಬ್ಬರೂ ಗೆಳೆಯರಲ್ಲ, ಕೇವಲ ಕಲಾವಿದರಷ್ಟೇ ಎಂದು ಘೋಷಿಸಿಕೊಂಡಿದ್ದರು.

ಹಿರಿಯ ಕಲಾವಿದರಾದ ವಿಷ್ಣುವರ್ಧನ್, ಅಂಬರೀಷ್ ಅವರಂತೆ ಕುಚಿಕು ಗೆಳೆಯರು ಎಂದು ಕರೆಸಿಕೊಳ್ಳುತ್ತಿದ್ದ ಇವರಿಬ್ಬರೂ ದೂರವಾದ ನಂತರ ಅನೇಕ ಊಹಾಪೋಹಗಳು ಕೇಳಿಬಂದವು.

ಈ ಬಗ್ಗೆ ಇದೀಗ ಸುದೀಪ್ ಮಾಧ್ಯಮವೊಂದರ ಸಂದರ್ಶನ ವೇಳೆ ಮಾತನಾಡಿದ್ದಾರೆ. ಉತ್ತಮ ಗೆಳೆಯರಾಗಿದ್ದ ನಾವು ದೂರವಾದಾಗ ಎಲ್ಲರಿಗೂ ನೋವಾಗಿದ್ದು ನಿಜ. ನನ್ನ ಕಡೆಯಿಂದ ಏನಾದರೂ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಂಡು ದರ್ಶನ್ ಜೊತೆ ಮೊದಲಿನಂತೆ ಸ್ನೇಹ ಮಾಡಲು ನಾನು ಸಿದ್ದ. ನಾನು ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ. ಟ್ವಿಟ್ಟರ್ ನಲ್ಲಿ ಅವರನ್ನು ಅನ್ ಫಾಲೋ ಮಾಡಿಲ್ಲ. ದರ್ಶನ್ ಒಳ್ಳೊಳ್ಳೆ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರ ಮುಂದಿನ ಯಜಮಾನ ನನ್ನ ಪೈಲ್ವಾನ್ ಚಿತ್ರಕ್ಕಿಂತಲೂ ಹೆಚ್ಚಿನ ಯಶಸ್ಸು ಕಾಣಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಭವಿಷ್ಯದಲ್ಲಿ ದರ್ಶನ್ ಜೊತೆ ಒಂದಾಗುವ ಅವಕಾಶ ಸಿಕ್ಕರೆ ಖಂಡಿತಾ ಒಂದಾಗಿ ಅವರ ಜೊತೆ ಸಿನಿಮಾ ಮಾಡಲು ಸಿದ್ದನಿದ್ದೇನೆ, ಆದರೆ ಗೌರವ ಸಿಗದ ಕಡೆ ನಾನು ಹೋಗುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT