ದರ್ಶನ್ ಮತ್ತು ರವಿಚಂದ್ರನ್ 
ಸಿನಿಮಾ ಸುದ್ದಿ

ಕ್ರೇಜಿಸ್ಟಾರ್ ನಟನೆಯ ದಶರಥ ಸಿನಿಮಾ ಟೈಟಲ್ ಸಾಂಗ್ ಗೆ ಚಾಲೆಂಜಿಂಗ್ ಸ್ಟಾರ್ ಧ್ವನಿ!

ಎಂ.ಎಸ್. ರಮೇಶ್ ನಿರ್ದೇಶನದಲ್ಲಿ ರಿಲೀಸ್‌ಗೆ ರೆಡಿ ಆಗಿರೋ ದಶರಥ ಸಿನಿಮಾದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಹಾಡಿರೋ ಹಾಡಿಗೆ, ಕ್ರೇಜಿಸ್ಟಾರ್​ ರವಿಚಂದ್ರನ್​...

ಎಂ.ಎಸ್. ರಮೇಶ್ ನಿರ್ದೇಶನದಲ್ಲಿ ರಿಲೀಸ್‌ಗೆ ರೆಡಿ ಆಗಿರೋ ದಶರಥ ಸಿನಿಮಾದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಹಾಡಿರೋ ಹಾಡಿಗೆ, ಕ್ರೇಜಿಸ್ಟಾರ್​ ರವಿಚಂದ್ರನ್​ ಸ್ಟೆಪ್ ಹಾಕಿದ್ದಾರೆ. 
ನೆರೇಷನ್​ಮಾಡಿ ಸೈ ಎನಿಸಿಕೊಂಡಿದ್ದ ದರ್ಶನ್​ ಈಗ ಕ್ರೇಜಿಸ್ಟಾರ್‌ಗಾಗಿ ಹಾಡನ್ನೇ ಹಾಡಿದ್ದು, ದರ್ಶನ್ ಧ್ವನಿಯಲ್ಲಿ ಹಾಡು ಹೇಗೆ ಕೇಳಲಿದೆ, ಅದಕ್ಕೆ ರವಿಚಂದ್ರನ್ ಡ್ಯಾನ್ಸ್ ಹೇಗಿರಲಿದೆ ಅನ್ನೋ ಕುತೂಹಲ ಅಭಿಮಾನಿಗಳಲ್ಲಿದೆ.
ಹಾಡಲು ದರ್ಶನ್ ನಿರಾಕರಿಸಿದರು, ಆದರೆ ಅವರದ ಶೈಲಿಯಲ್ಲೇ ದರ್ಶನ್ ಹಾಡಿನ ಸಾಹಿತ್ಯ ಓದಿದ್ದಾರೆ, ಇದು ಚಿತ್ರತಂಡಕ್ಕೂ ಇಷ್ಟವಾಗಿದೆ, ಇದಕ್ಕೆ ಹೊಂದುವ ಹಿನ್ನೆಲೆ ಸಂಗೀತ ನೀಡಲು ನಿರ್ಧರಿಸಿದೆ, ಇದನ್ನು ಟೈಟಲ್ ಟ್ರ್ಯಾಕ್ ಆಗಿ ರಿಲೀಸ್ ಮಾಡಲು ಪ್ಲಾನ್ ಮಾಡಲಾಗಿದೆ. 
ರಾಮಾಯಣದ ದಶರಥನ ಪಾತ್ರವನ್ನು  ರವಿಚಂದ್ರನ್ ಹೇಗೆ ನಟಿಸಿದ್ದಾರೆ ಎಂಬ ಬಗ್ಗೆ 
ನಿರೂಪಿಸಲಾಗಿದೆ, ಕಥಾ ನಾಯಕನ ಪಾತ್ರ ಪರಿಚಯ ದರ್ಶನ್ ಧ್ವನಿಯಾಲಾಗಿದೆ,
ಸಿನಿಮಾದಲ್ಲಿ ಇದನ್ನು ಸರ್ ಪ್ರೈಸ್ ಎಲಿಮೆಂಟ್ ಆಗಿ ಬಳಸಲಾಗಿದೆ, ಆರಂಭದಲ್ಲಿ ಮಾತ್ರವಲ್ಲ, ಕ್ಲೈಮ್ಯಾಕ್ಸ್ ನಲ್ಲೂ ಕೂಡ ದರ್ಶನ್ ಧ್ವನಿ ಬಳಸಲಾಗಿದೆ,, ಆಕಾಶ್ ರೆಕಾರ್ಡಿಂಗ್ ಸ್ಟುಡಿಯೊದಲ್ಲಿ ತಿಂಗಳ ಹಿಂದೆ ವಾಯ್ ಮಿಕ್ಸಿಂಗ್ ಕೆಲಸ ಮಾಡಲಾಗಿದೆ ಎಂದು ರಮೇಶ್ ತಿಳಿಸಿದ್ದಾರೆ.
ಸುಮಾರು 15 ವರ್ಷಗಳ ಹಿಂದೆ ಚಂದು ಸಿನಿಮಾದಲ್ಲಿ ನಟಿಸಿದ್ದ ಸೋನಿಯಾ ಅಗರ್ವಾಲ್, ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ವಾಪಸ್ಸಾಗಿದ್ದು, ರವಿಚಂದ್ರನ್‌ಗೆ ಜೋಡಿಯಾಗಿದ್ದಾರೆ. ಚಿತ್ರದ ತಾರಾಗಣದಲ್ಲಿ ರಂಗಾಯಣ ರಘು, ಪ್ರಿಯಾಮಣಿ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT