ರವಿಶಂಕರ್ 
ಸಿನಿಮಾ ಸುದ್ದಿ

'ಕಾಣೆಯಾದವರ ಬಗ್ಗೆ ಪ್ರಕಟಣೆ': ಇದು ನಿರ್ದೇಶಕ ಅನಿಲ್ ಕುಮಾರ್ ಮುಂದಿನ ಚಿತ್ರ!

ನಿರ್ದೇಶಕ ಅನಿಲ್ ಕುಮಾರ್ ಇದಾಗಲೇ ಧೀರನ್ ರಾಜ್‌ಕುಮಾರ್ ಅವರ ಚೊಚ್ಚಲ ಚಿತ್ರ "ದಾರಿ ತಪ್ಪಿದ ಮಗ" ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರವು....

ನಿರ್ದೇಶಕ ಅನಿಲ್ ಕುಮಾರ್  ಇದಾಗಲೇ ಧೀರನ್ ರಾಜ್‌ಕುಮಾರ್ ಅವರ ಚೊಚ್ಚಲ ಚಿತ್ರ "ದಾರಿ ತಪ್ಪಿದ ಮಗ" ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರವು ಅಕ್ಟೋಬರ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಏತನ್ಮಧ್ಯೆ, ನಿರ್ದೇಶಕರು ತಮ್ಮ ಮುಂದಿನ ಯೋಜನೆಯನ್ನು  ಕುರಿತು ಆಲೋಚಿಸಿದ್ದಾರೆ.  ‘ಕಾಣೆಯಾದ ಜನರನ್ನು’ ಉಲ್ಲೇಖಿಸುವ "ಕಾಣೆಯಾದವರ ಬಗ್ಗೆ ಪ್ರಕಟಣೆ" ಎಂಬ ಶೀರ್ಷಿಕೆಯ ಈ ಚಿತ್ರದಲ್ಲಿ ಹಿರಿಯ ಕಲಾವಿದರನ್ನು ತೆರೆ ಮೇಲೆ ತರುವ ಪ್ರಯತ್ನದಲ್ಲಿದ್ದಾರೆ.
ಈ ಚಿತ್ರದಲ್ಲಿ ರಂಗಾಯಣ ರಘು, ರವಿಶಂಕರ್ ಮತ್ತು ತಬಲಾ ನಾಣಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅವರು 65 ವರ್ಷಕ್ಕಿಂತ ಮೇಲ್ಪಟ್ಟವರ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಅಲ್ಲದೆ ಚಿತ್ರದ ಆಕರ್ಷಣೆ ಹೆಚ್ಚಿಸುವುದಕ್ಕಾಗಿ ಚಿಕ್ಕಣ್ಣವನ್ನು ಸಹ ಕರೆತರುತ್ತಿದ್ದಾರೆ. “ಸಾಮಾನ್ಯವಾಗಿ, ನಮ್ಮ ಚಲನಚಿತ್ರಗಳು ಯುವಕರನ್ನು ಕುರಿತಾಗಿರಲಿದೆ.ಹಾಗೆಯೇ ನಾವಿದನ್ನು ಕುಟುಂಬಾಧಾರಿತ ಎಂದು ಕರೆಯುತ್ತೇವೆ. ಆದರೆ ಈ ಚಿತ್ರದ ಮೂಲಕ, ನಾನು ಮಕ್ಕಳಿಂದ ವೃದ್ಧರವರೆಗೆ ಎಲ್ಲ ರೀತಿಯ ಪ್ರೇಕ್ಷಕರನ್ನು ರಂಜಿಸಲು ಬಯಸುತ್ತೇನೆ. ಆಗಸ್ಟ್ 6 ರಿಂದ ಶೂಟಿಂಗ್ ಪ್ರಾರಂಭಿಸಲಿರುವ  ಈ ಚಿತ್ರ ಮಾನವೀಯ ಮೌಲ್ಯಗಳ ಬಗ್ಗೆ ಇರುತ್ತದೆ, ”ಎಂದು ಅನಿಲ್ ಕುಮಾರ್ ಹೇಳುತ್ತಾರೆ. 
ಮೊದಲ ಹಂತದಲ್ಲಿ  ಬ್ಯಾಂಕಾಕ್ ಮತ್ತು ಪಟ್ಟಾಯದಲ್ಲಿ 20 ದಿನಗಳಲ್ಲಿ ಶುಟಿಂಗ್ ನಡೆಸಲು ಉದ್ದೇಶಿಸಲಾಗಿದೆ.“ಈ ಚಿತ್ರವು 50 ರ ದಶಕದಿಂದ ಪ್ರಾರಂಭವಾಗಿ ಇಂದಿನ ತಲೆಮಾರಿನವರೆಗೆ ಸಾಗಲಿದೆ"
 ನವೀನ್ ಕುಮಾರ್ ನಿರ್ಮಾಣದ ಅರ್ಜುನ್ ಜನ್ಯ ಸಂಗೀತ  ಕೆ.ಎಂ.ಪ್ರಕಾಶ್ ಸಂಕಲನಕಾರರಾಗಿ ಕೆಲಸ ಮಾಡಲಿದ್ದಾರೆ.ಇನ್ನು "ದಾರಿ ತಪ್ಪಿದ ಮಗ" ಛಾಯಾಗ್ರಾಹಕರಾದ ಶಿವಕುವಾರ್ ಬಿ ಕೆ ಸಹ ಈ ಚಿತ್ರತಂಡದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT