ನಿರೂಪ್ ಭಂಡಾರಿ 
ಸಿನಿಮಾ ಸುದ್ದಿ

ಮಹಿಳೆಯರನ್ನು ಅವರ ಪ್ರತಿಭೆಯಿಂದಾಗಿ ಆಯ್ಕೆ ಮಾಡಲಾಗಿದೆ: ನಿರೂಪ್ ಭಂಡಾರಿ

ರಂಗಿ ತರಂಗ ಚಿತ್ರದ ಖ್ಯಾತಿಯ ನಟ ನಿರೂಪ್ ಭಂಡಾರಿ ಅಭಿಯನದ ಮೂರನೇ ಚಿತ್ರ ಆದಿಲಕ್ಷ್ಮಿ ಪುರಾಣ ನಾಳೆ ತೆರೆಗೆ ಬರುತ್ತಿದ್ದು, ಅವರ ಹಿಂದಿನ...

ರಂಗಿ ತರಂಗ ಚಿತ್ರದ ಖ್ಯಾತಿಯ ನಟ ನಿರೂಪ್ ಭಂಡಾರಿ ಅಭಿಯನದ ಮೂರನೇ ಚಿತ್ರ ಆದಿಲಕ್ಷ್ಮಿ ಪುರಾಣ ನಾಳೆ ತೆರೆಗೆ ಬರುತ್ತಿದ್ದು, ಅವರ ಹಿಂದಿನ ಎರಡು ಚಿತ್ರಗಳಾದ 'ರಂಗಿ ತರಂಗ' ಹಾಗೂ 'ರಾಜರಾಥ'ವನ್ನು ನಿರೂಪ್ ಸಹೋದರ ಅನೂಪ್ ಭಂಡಾರಿ ಅವರು ನಿರ್ದೇಶಿಸಿದ್ದರು.
ಇನ್ನು ನಿರೂಪ್ ಭಂಡಾರಿ ಹಾಗೂ ರಾಧಿಕಾ ಪಂಡಿತ್ ಅಭಿನಯಂದ 'ಆದಿಲಕ್ಷ್ಮಿ ಪುರಾಣ'ವನ್ನು ವಿ ಪ್ರಿಯಾ ಅವರು ನಿರ್ದೇಶಿಸಿದ್ದಾರೆ.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜತೆ ಮಾತನಾಡಿದ ನಿರೂಪ್ ಭಂಡಾರಿ ಅವರು, ಹೌದು, ನನ್ನ ಸಹೋದರ ಮತ್ತು ಎರಡು ಚಿತ್ರಗಳ ಕಾರ್ಯಕಾರಿ ನಿರ್ಮಾಪಕರಾಗಿರುವ ತಂದೆ ಸೆಟ್ ನಲ್ಲಿದ್ದಾರೆ. ನಾನು ಏನಾದರೂ ತಪ್ಪು ಮಾಡಿದರೆ ಅನೂಪ್ ಹೇಳುತ್ತಾರೆ. ಅಂತೆಯೇ, ನನಗೆ ಅಗತ್ಯವಿದ್ದರೆ ಇನ್ನೂ ಒಂದು ಟೇಕ್ ಕೇಳುವ ಸ್ವಾತಂತ್ರ್ಯವಿರುತ್ತದೆ ಎಂದಿದ್ದಾರೆ.
ನಾನು ಈ ಬಾರಿ ಹೊಸ ನಿರ್ದೇಶಕರೊಂದಿಗೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ. ವಿ ಪ್ರಿಯಾ ನಿನ್ನೆ ತನಕ ಅಪರಿಚಿತರಾಗಿದ್ದರು. ಆದರೆ ಇಂದು ನಾವು ಉತ್ತಮ ಸಂಬಂಧವನ್ನು ಬೆಳೆಸಿಕೊಂಡಿದ್ದೇವೆ ಎಂದು ನಿರೂಪ್ ಹೇಳಿದ್ದಾರೆ.
ಪ್ರಿಯಾ ತನ್ನ ಕೆಲಸದ ಬಗ್ಗೆ ತುಂಬಾ ಆಸಕ್ತಿ ಹೊಂದಿದ್ದಾಳೆ. ಅವಳೊಂದಿಗಿನ ವಿವಿಧ ಸಭೆಗಳು ನನಗೆ ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳಲು ಸಹಾಯ ಮಾಡಿದವು ಎಂದು ನಿರೂಪ್ ನೆನಪಿಸಿಕೊಂಡರು.
ಈ ಚಿತ್ರದ ನಿರ್ದೇಶಕರು ಮಾತ್ರ ಮಹಿಳೆ ಅಲ್ಲ. ನಟಿ, ಸಹಾಯಕ ನಿರ್ದೇಶಕರು ಹಾಗೂ ಸೌಂಡ್ ಇಂಜಿನಿಯರ್ ಸೇರಿದಂತೆ  ಸೆಟ್ ನಲ್ಲಿ ಹಲವು ಮಹಿಳೆಯರಿದ್ದರು. ಆದರೆ ಅವರಲ್ಲಿ ಯಾರನ್ನೂ ಮಹಿಳೆ ಎಂಬ ಕಾರಣಕ್ಕೆ ಆಯ್ಕೆ ಮಾಡಿಲ್ಲ. ಅವರ ಪ್ರತಿಭೆಯಿಂದಾಗಿ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ ಎಂದರು.
ರಾಕ್‌ ಲೈನ್ ನಿರ್ಮಾಣದ 'ಆದಿಲಕ್ಷ್ಮಿ ಪುರಾಣ' ಚಿತ್ರವನ್ನು ಕಾಮಿಡಿ ಟಚ್ ಮೂಲಕ ನಿರೂಪಣೆ ಮಾಡಲಾಗಿದೆ ಎಂದು ನಿರೂಪ್ ಭಂಡಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!