ಅಭಿಲಾಷ್ 
ಸಿನಿಮಾ ಸುದ್ದಿ

ಪೋಸ್ಟರ್ ಡಿಸೈನರ್ ನಿಂದ ನಟನಾಗಿ ಬಡ್ತಿ ಪಡೆದ ಅಭಿಲಾಷ್

ಪೋಸ್ಟರ್ ವಿನ್ಯಾಸದಿಂದ ಹಿಡಿದು ಅಲ್ಲಿಂದ ಪಾತ್ರದ ನಟನಾಗಿ, ಸಹಾಯಕ ನಿರ್ದೇಶಕನಾಗಿ ಚಿತ್ರತಂಡದಲ್ಲಿ ವಿವಿಧ ...

ಪೋಸ್ಟರ್ ವಿನ್ಯಾಸದಿಂದ ಹಿಡಿದು ಅಲ್ಲಿಂದ ಪಾತ್ರದ ನಟನಾಗಿ, ಸಹಾಯಕ ನಿರ್ದೇಶಕನಾಗಿ ಚಿತ್ರತಂಡದಲ್ಲಿ ವಿವಿಧ ಕೆಲಸಗಳನ್ನು ಮಾಡಿದ ಅಭಿಲಾಷ್ ಇಂದು ನಟನಾಗಿ ಗುರುತಿಸಬೇಕಾದರೆ ಅವರ ಪ್ರಯಾಣ ಸುದೀರ್ಘವಾಗಿದೆ.
ರವಿಚಂದ್ರನ್ ಅಭಿನಯದ ದಶರಥ ಚಿತ್ರದಲ್ಲಿ ಅಭಿಲಾಷ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಕ್ರೇಜಿ ಸ್ಟಾರ್ ಜೊತೆ ಚಿತ್ರದಲ್ಲಿ ಮುಖಾಮುಖಿಯಾಗಿ ಅಭಿನಯಿಸುತ್ತಿದ್ದಾರೆ.
ನಟನಾಗಬೇಕೆಂಬ ಆಸೆಯಿಂದ ಅಭಿಲಾಷ್ ಚಿತ್ರರಂಗಕ್ಕೆ ಕಾಲಿಟ್ಟರಂತೆ. ಆದರೆ ಅಲ್ಲಿನ ಪರಿಸ್ಥಿತಿ ಪೋಸ್ಟರ್ ಬಾಯ್ ಕೆಲಸವನ್ನು ಆರಂಭಿಸುವಂತೆ ಮಾಡಿತು. ನಂತರ ವಿರಾಟ್, ಬುಗುರಿ, ಒಂದು ರೊಮ್ಯಾಂಟಿಕ್ ಕಥೆ ಮತ್ತು ಮುಫ್ತಿಯಲ್ಲಿ ಹಲವು ಪಾತ್ರಗಳನ್ನು ಮಾಡಿದ್ದಾರೆ. 
ನಿರ್ದೇಶಕ ಎಂ ಡಿ ಶ್ರೀಧರ್ ಜೊತೆಗೆ ಸಹಾಯಕ ನಿರ್ದೇಶಕರಾಗಿ ದುಡಿದರಂತೆ. ಯಾರ್ ಯಾರೋ ಗೋರಿ ಮೇಲೆ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. 
ರಾಘವೇಂದ್ರ ರಾಜ್ ಕುಮಾರ್ ಅವರ ಆಡಿಸಿದಾತ, ಅಜಯ್ ರಾವ್ ಜೊತೆಗೆ ಕೃಷ್ಣ ಟಾಕೀಸ್ ಚಿತ್ರದಲ್ಲಿ ಕೂಡ ಅಭಿನಯಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?