ಪೋಸ್ಟರ್ ವಿನ್ಯಾಸದಿಂದ ಹಿಡಿದು ಅಲ್ಲಿಂದ ಪಾತ್ರದ ನಟನಾಗಿ, ಸಹಾಯಕ ನಿರ್ದೇಶಕನಾಗಿ ಚಿತ್ರತಂಡದಲ್ಲಿ ವಿವಿಧ ಕೆಲಸಗಳನ್ನು ಮಾಡಿದ ಅಭಿಲಾಷ್ ಇಂದು ನಟನಾಗಿ ಗುರುತಿಸಬೇಕಾದರೆ ಅವರ ಪ್ರಯಾಣ ಸುದೀರ್ಘವಾಗಿದೆ.
ರವಿಚಂದ್ರನ್ ಅಭಿನಯದ ದಶರಥ ಚಿತ್ರದಲ್ಲಿ ಅಭಿಲಾಷ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಕ್ರೇಜಿ ಸ್ಟಾರ್ ಜೊತೆ ಚಿತ್ರದಲ್ಲಿ ಮುಖಾಮುಖಿಯಾಗಿ ಅಭಿನಯಿಸುತ್ತಿದ್ದಾರೆ.
ನಟನಾಗಬೇಕೆಂಬ ಆಸೆಯಿಂದ ಅಭಿಲಾಷ್ ಚಿತ್ರರಂಗಕ್ಕೆ ಕಾಲಿಟ್ಟರಂತೆ. ಆದರೆ ಅಲ್ಲಿನ ಪರಿಸ್ಥಿತಿ ಪೋಸ್ಟರ್ ಬಾಯ್ ಕೆಲಸವನ್ನು ಆರಂಭಿಸುವಂತೆ ಮಾಡಿತು. ನಂತರ ವಿರಾಟ್, ಬುಗುರಿ, ಒಂದು ರೊಮ್ಯಾಂಟಿಕ್ ಕಥೆ ಮತ್ತು ಮುಫ್ತಿಯಲ್ಲಿ ಹಲವು ಪಾತ್ರಗಳನ್ನು ಮಾಡಿದ್ದಾರೆ.
ನಿರ್ದೇಶಕ ಎಂ ಡಿ ಶ್ರೀಧರ್ ಜೊತೆಗೆ ಸಹಾಯಕ ನಿರ್ದೇಶಕರಾಗಿ ದುಡಿದರಂತೆ. ಯಾರ್ ಯಾರೋ ಗೋರಿ ಮೇಲೆ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ರಾಘವೇಂದ್ರ ರಾಜ್ ಕುಮಾರ್ ಅವರ ಆಡಿಸಿದಾತ, ಅಜಯ್ ರಾವ್ ಜೊತೆಗೆ ಕೃಷ್ಣ ಟಾಕೀಸ್ ಚಿತ್ರದಲ್ಲಿ ಕೂಡ ಅಭಿನಯಿಸುತ್ತಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos