ಅಭಿಲಾಷ್ 
ಸಿನಿಮಾ ಸುದ್ದಿ

ಪೋಸ್ಟರ್ ಡಿಸೈನರ್ ನಿಂದ ನಟನಾಗಿ ಬಡ್ತಿ ಪಡೆದ ಅಭಿಲಾಷ್

ಪೋಸ್ಟರ್ ವಿನ್ಯಾಸದಿಂದ ಹಿಡಿದು ಅಲ್ಲಿಂದ ಪಾತ್ರದ ನಟನಾಗಿ, ಸಹಾಯಕ ನಿರ್ದೇಶಕನಾಗಿ ಚಿತ್ರತಂಡದಲ್ಲಿ ವಿವಿಧ ...

ಪೋಸ್ಟರ್ ವಿನ್ಯಾಸದಿಂದ ಹಿಡಿದು ಅಲ್ಲಿಂದ ಪಾತ್ರದ ನಟನಾಗಿ, ಸಹಾಯಕ ನಿರ್ದೇಶಕನಾಗಿ ಚಿತ್ರತಂಡದಲ್ಲಿ ವಿವಿಧ ಕೆಲಸಗಳನ್ನು ಮಾಡಿದ ಅಭಿಲಾಷ್ ಇಂದು ನಟನಾಗಿ ಗುರುತಿಸಬೇಕಾದರೆ ಅವರ ಪ್ರಯಾಣ ಸುದೀರ್ಘವಾಗಿದೆ.
ರವಿಚಂದ್ರನ್ ಅಭಿನಯದ ದಶರಥ ಚಿತ್ರದಲ್ಲಿ ಅಭಿಲಾಷ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಕ್ರೇಜಿ ಸ್ಟಾರ್ ಜೊತೆ ಚಿತ್ರದಲ್ಲಿ ಮುಖಾಮುಖಿಯಾಗಿ ಅಭಿನಯಿಸುತ್ತಿದ್ದಾರೆ.
ನಟನಾಗಬೇಕೆಂಬ ಆಸೆಯಿಂದ ಅಭಿಲಾಷ್ ಚಿತ್ರರಂಗಕ್ಕೆ ಕಾಲಿಟ್ಟರಂತೆ. ಆದರೆ ಅಲ್ಲಿನ ಪರಿಸ್ಥಿತಿ ಪೋಸ್ಟರ್ ಬಾಯ್ ಕೆಲಸವನ್ನು ಆರಂಭಿಸುವಂತೆ ಮಾಡಿತು. ನಂತರ ವಿರಾಟ್, ಬುಗುರಿ, ಒಂದು ರೊಮ್ಯಾಂಟಿಕ್ ಕಥೆ ಮತ್ತು ಮುಫ್ತಿಯಲ್ಲಿ ಹಲವು ಪಾತ್ರಗಳನ್ನು ಮಾಡಿದ್ದಾರೆ. 
ನಿರ್ದೇಶಕ ಎಂ ಡಿ ಶ್ರೀಧರ್ ಜೊತೆಗೆ ಸಹಾಯಕ ನಿರ್ದೇಶಕರಾಗಿ ದುಡಿದರಂತೆ. ಯಾರ್ ಯಾರೋ ಗೋರಿ ಮೇಲೆ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. 
ರಾಘವೇಂದ್ರ ರಾಜ್ ಕುಮಾರ್ ಅವರ ಆಡಿಸಿದಾತ, ಅಜಯ್ ರಾವ್ ಜೊತೆಗೆ ಕೃಷ್ಣ ಟಾಕೀಸ್ ಚಿತ್ರದಲ್ಲಿ ಕೂಡ ಅಭಿನಯಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT