ಅಭಿಲಾಷ್ 
ಸಿನಿಮಾ ಸುದ್ದಿ

ಪೋಸ್ಟರ್ ಡಿಸೈನರ್ ನಿಂದ ನಟನಾಗಿ ಬಡ್ತಿ ಪಡೆದ ಅಭಿಲಾಷ್

ಪೋಸ್ಟರ್ ವಿನ್ಯಾಸದಿಂದ ಹಿಡಿದು ಅಲ್ಲಿಂದ ಪಾತ್ರದ ನಟನಾಗಿ, ಸಹಾಯಕ ನಿರ್ದೇಶಕನಾಗಿ ಚಿತ್ರತಂಡದಲ್ಲಿ ವಿವಿಧ ...

ಪೋಸ್ಟರ್ ವಿನ್ಯಾಸದಿಂದ ಹಿಡಿದು ಅಲ್ಲಿಂದ ಪಾತ್ರದ ನಟನಾಗಿ, ಸಹಾಯಕ ನಿರ್ದೇಶಕನಾಗಿ ಚಿತ್ರತಂಡದಲ್ಲಿ ವಿವಿಧ ಕೆಲಸಗಳನ್ನು ಮಾಡಿದ ಅಭಿಲಾಷ್ ಇಂದು ನಟನಾಗಿ ಗುರುತಿಸಬೇಕಾದರೆ ಅವರ ಪ್ರಯಾಣ ಸುದೀರ್ಘವಾಗಿದೆ.
ರವಿಚಂದ್ರನ್ ಅಭಿನಯದ ದಶರಥ ಚಿತ್ರದಲ್ಲಿ ಅಭಿಲಾಷ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಕ್ರೇಜಿ ಸ್ಟಾರ್ ಜೊತೆ ಚಿತ್ರದಲ್ಲಿ ಮುಖಾಮುಖಿಯಾಗಿ ಅಭಿನಯಿಸುತ್ತಿದ್ದಾರೆ.
ನಟನಾಗಬೇಕೆಂಬ ಆಸೆಯಿಂದ ಅಭಿಲಾಷ್ ಚಿತ್ರರಂಗಕ್ಕೆ ಕಾಲಿಟ್ಟರಂತೆ. ಆದರೆ ಅಲ್ಲಿನ ಪರಿಸ್ಥಿತಿ ಪೋಸ್ಟರ್ ಬಾಯ್ ಕೆಲಸವನ್ನು ಆರಂಭಿಸುವಂತೆ ಮಾಡಿತು. ನಂತರ ವಿರಾಟ್, ಬುಗುರಿ, ಒಂದು ರೊಮ್ಯಾಂಟಿಕ್ ಕಥೆ ಮತ್ತು ಮುಫ್ತಿಯಲ್ಲಿ ಹಲವು ಪಾತ್ರಗಳನ್ನು ಮಾಡಿದ್ದಾರೆ. 
ನಿರ್ದೇಶಕ ಎಂ ಡಿ ಶ್ರೀಧರ್ ಜೊತೆಗೆ ಸಹಾಯಕ ನಿರ್ದೇಶಕರಾಗಿ ದುಡಿದರಂತೆ. ಯಾರ್ ಯಾರೋ ಗೋರಿ ಮೇಲೆ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. 
ರಾಘವೇಂದ್ರ ರಾಜ್ ಕುಮಾರ್ ಅವರ ಆಡಿಸಿದಾತ, ಅಜಯ್ ರಾವ್ ಜೊತೆಗೆ ಕೃಷ್ಣ ಟಾಕೀಸ್ ಚಿತ್ರದಲ್ಲಿ ಕೂಡ ಅಭಿನಯಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT