ಕೌಶಿಕ್ ಸೇನ್ 
ಸಿನಿಮಾ ಸುದ್ದಿ

ಗುಂಪು ಗಲಭೆ ವಿರೋಧಿಸಿ ಪ್ರಧಾನಿಗೆ ಬರೆದ ಪತ್ರಕ್ಕೆ ಸಹಿ ಹಾಕಿದ ನಟನಿಗೆ ಜೀವಬೆದರಿಕೆ

ಗುಂಪು ಗಲಭೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಲೆಬ್ರೆಟಿಗಳು ಬರೆದಿದ್ದ ಪತ್ರಕ್ಕೆ ಸಹಿ ಹಾಕಿದ ನಟ ಕೌಶಿಕ್ ಸೇನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೋನ್ ನಂಬರ್ ನ್ನು ಪಾರ್ವಡ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ನವದೆಹಲಿ: ಗುಂಪು ಗಲಭೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಲೆಬ್ರೆಟಿಗಳು ಬರೆದಿದ್ದ ಪತ್ರಕ್ಕೆ ಸಹಿ ಹಾಕಿದ ನಟ ಕೌಶಿಕ್ ಸೇನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೋನ್ ನಂಬರ್ ನ್ನು ಪಾರ್ವಡ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಅಸಹಷ್ಣುತೆ ಮತ್ತು ಗುಂಪು ಗಲಭೆ ವಿರುದ್ಧದ  ಧ್ವನಿಯನ್ನು ನಿಲ್ಲಿಸದಿದ್ದರೆ ಹತ್ಯೆ ಮಾಡುವುದಾಗಿ ಅಪರಿಚಿತರೊಬ್ಬರು ನಿನ್ನೆ  ಕರೆ ಮಾಡಿದ್ದರು ಎಂದು ಸೇನ್  ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಈ ಪ್ರಕರಣದತ್ತ ಗಮನ ಹರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಮಾಣಿಕವಾಗಿದ್ದೇನೆ, ಇಂತಹ ಕರೆಗಳ ಬಗ್ಗೆ ತಲೆಕೆಡಿಸಿಕೊಳಲ್ಲ, ಪ್ರಧಾನಿಗೆ ಬರೆದಿರುವ ಪತ್ರಕ್ಕೆ ಸಹಿ ಹಾಕಿರುವ ಇತರರಿಗೂ ಈ ಬಗ್ಗೆ ತಿಳಿಸಿದ್ದೇನೆ. ಆ ನಂಬರ್ ನ್ನು ಪಾವರ್ಡ್ ಮಾಡಿರುವುದಾಗಿ ಅವರು ಹೇಳಿದ್ದಾರೆ.
ಚಲನಚಿತ್ರ ನಟರು, ನಿರ್ಮಾಪಕರು, ಲೇಖಕರು, ಸೇರಿದಂತೆ 49 ವಿವಿಧ ಕ್ಷೇತ್ರಗಳ ಗಣ್ಯರು, ರಾಮನ ಹೆಸರಿನಲ್ಲಿ ದೇಶದಲ್ಲಿ ನಡೆಯುತ್ತಿರುವ ಗುಂಪು ಗಲಭೆ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಪತ್ರ ಬರೆದಿದ್ದರು. 
ಜೈ ಶ್ರೀ ರಾಮ್ ಹೆಸರಿನಲ್ಲಿ ನಡೆಯುತ್ತಿರುವ ಗುಂಪು ಗಲಭೆಗಳು ಕಾನೂನು ಸುವ್ಯವಸ್ಥೆಗೆ ಮಾರಕವಾಗಿದ್ದು, ಇಂತಹ ಘಟನೆಗಳ ಬಗ್ಗೆ ವಿಷಾಧ ಇರುವುದಾಗಿ ಕೌಶಿಕ್ ಸೇನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT