ದರ್ಶನ್ 
ಸಿನಿಮಾ ಸುದ್ದಿ

'ರಾಮನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಡು ಹಾಡಂಗಿಲ್ಲ'

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಗಳಿಗೆ ಒಂದು ಬ್ಯಾಡ್ ನ್ಯೂಸ್, ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ದರ್ಶನ್ ...

ರಾಮನಗರ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಗಳಿಗೆ ಒಂದು ಬ್ಯಾಡ್ ನ್ಯೂಸ್, ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ  ನಟ ದರ್ಶನ್ ಹಾಡುಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ದರ್ಶನ್ ಹಾಡುಗಳನ್ನು ಬ್ಯಾನ್ ಮಾಡುವ ಮೂಲದ ಮಂಡ್ಯದಲ್ಲಿ ನಿಖಿಲ್ ಸೋಲಿಗೆ ರಾಮನಗರದಲ್ಲಿ ಸೇಡು ತೀರಿಸಿಕೊಳ್ಳುತ್ತಿದ್ದಾರಾ  ಎಂಬ ಅನುಮಾನವೊಂದು ಇದೀಗ ಕಾಡುತ್ತಿದೆ.
ರಾಮನಗರದಲ್ಲಿ ಚಾಮುಂಡೇಶ್ವರಿ ವರ್ಧಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ದರ್ಶನ್ ಸಿನಿಮಾದ ಹಾಡು ಹಾಡೋಕೆ ಮುಂದಾದರೂ ಆಯೋಜಕರು ಬಿಟ್ಟಿಲ್ಲ. ಯಾವುದೇ ಕಾರಣಕ್ಕೂ ದರ್ಶನ್ ಸಿನಿಮಾದ ಹಾಡನ್ನು ಹಾಡಲೇಬಾರದು ಎಂದು ಕಾರ್ಯಕ್ರಮದ ಆಯೋಜಕರು ಫರ್ಮಾನು ಹೊರಡಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ದರ್ಶನ್ ಸಿನಿಮಾದ ಹಾಡುಗಳು ಯಾಕೆ ಬೇಡವೆಂದು ಹೇಳಿರುವುದರ ಬಗ್ಗೆ ಆಯೋಜಕರು ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಮಂಡ್ಯ ಚುನಾವಣೆಯ ಎಫೆಕ್ಟ್ ನಿಂದಾಗಿಯೇ ರಾಮನಗರದಲ್ಲಿ ದರ್ಶನ್ ಸಿನಿಮಾದ ಹಾಡುಗಳನ್ನು ಬ್ಯಾನ್ ಮಾಡಿರಬಹುದು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT