ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಯಶ್ ಗೆ ಆ್ಯಕ್ಟಿಂಗ್ ಹೇಳಿಕೊಟ್ಟಿದ್ದೇ....; ತೆಲುಗು ನಟ ಆಕಾಶ್ ಶಾಕಿಂಗ್ ಹೇಳಿಕೆ!

ರಾಕಿಂಗ್ ಸ್ಟಾರ್ ಯಶ್ ಅವರ ಕುರಿತಂತೆ ಖ್ಯಾತ ತೆಲುಗು ನಟ ಜೈ ಆಕಾಶ್ ಶಾಕಿಂಗ್ ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

ಹೈದರಾಬಾದ್: ರಾಕಿಂಗ್ ಸ್ಟಾರ್ ಯಶ್ ಅವರ ಕುರಿತಂತೆ ಖ್ಯಾತ ತೆಲುಗು ನಟ ಜೈ ಆಕಾಶ್ ಶಾಕಿಂಗ್ ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.
ಈ ಹಿಂದೆ ತೆಲುಗಿನಲ್ಲಿ ಇತ್ತೀಚೆಗೆ ತೆರೆಕಂಡು ಬಾಕ್ಸ್ ಆಫೀಸ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ಪೂರಿ ಜಗನ್ನಾಥ್ ನಿರ್ದೇಶನದ ಇಸ್ಮಾರ್ಟ್ ಶಂಕರ್ ಚಿತ್ರಕಥೆ ತನ್ನದು ಎಂದು ಹೇಳಿಕೊಂಡು ಭಾರಿ ಸುದ್ದಿ ಮಾಡಿದ್ದ ಜೈ ಆಕಾಶ್ ಈಗ ಮತ್ತೆ ತಮ್ಮ ವಿಚಿತ್ರ ಹೇಳಿಕೆಗಳ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.
ಯೂಟ್ಯೂಬ್ ಚಾನೆಲ್ ವೊಂದರ ಸಂದರ್ಶನದಲ್ಲಿ ಮಾತನಾಡಿರುವ ನಟ ಜೈ ಆಕಾಶ್, ತಮಗೆ ಯಾವುದೇ ನಿರ್ದೇಶಕ ಅವಕಾಶ ನೀಡುತ್ತಿಲ್ಲ. ಬೇಕೆಂದೇ ತಮ್ಮನ್ನು ತುಳಿಯಲು ಯತ್ನಿಸುತ್ತಿದ್ದಾರೆ. ಈಗ ಕೆಜಿಎಫ್ ಮೂಲಕ ಸದ್ದು ಮಾಡಿರುವ ನಟ ಯಶ್ ಗೆ ನಟನೆ ಹೇಳಿಕೊಟ್ಟಿದ್ದೇ ನಾನು ಎಂಬರ್ಥದಲ್ಲಿ ಹೇಳಿಕೆ ನೀಡಿ ನಟ ಜೈ ಆಕಾಶ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. ಅಂತೆಯೇ ಈಗಲೂ ನಾನು ಸಂಭಾವನೆ ಇಲ್ಲದೇ ನಟಿಸಲು ಸಿದ್ಧ. ಆದರೆ ಉತ್ತಮ ನಿರ್ದೇಶಕ ಮತ್ತು ನಿರ್ಮಾಪಕರು ಬೇಕು. ನನ್ನ ಕೆಲ ಚಿತ್ರಗಳನ್ನು ಬೇಕೆಂದೇ ಕೆಲವರು ತೆರೆಕಾಣದಂತೆ ಮಾಡಿದ್ದಾರೆ ಎಂದು ನಟ ಜೈ ಆಕಾಶ್ ಆರೋಪಿಸಿದ್ದಾರೆ.
ಇನ್ನು ನಟ ಜೈ ಆಕಾಶ್ ಈ ಹಿಂದೆ 2007ರಲ್ಲಿ ನಟಿ ಪ್ರಿಯಾ ಹಾಸನ್ ನಿರ್ದೇಶಿಸಿ ನಟಿಸಿದ್ದ ಜಂಭದ ಹುಡುಗಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೇ ಚಿತ್ರದಲ್ಲಿ ಸಹಾಯಕ ಪಾತ್ರದಲ್ಲಿ ನಟ ಯಶ್ ಕೂಡ ಅಭಿನಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT