ಗಣೇಶ್ 
ಸಿನಿಮಾ ಸುದ್ದಿ

'ವೇರ್ ಈಸ್ ಮೈ ಕನ್ನಡಕ' ಚಿತ್ರ ಕೈಬಿಟ್ಟ ಗಣೇಶ್, ಬದಲಿ ನಾಯಕರಾರು ಗೊತ್ತಾ?

ಕನ್ನಡ ಚಿತ್ರ ಪ್ರೇಮಿಗಳ್ ನಿರೀಕ್ಷೆಯನ್ನು ಹೆಚ್ಚುವಂತೆ ಮಾಡಿದ್ದ "ವೇರ್ ಈಸ್ ಮೈ ಕನ್ನಡಕ" ಚಿತ್ರದ ನಾಯಕ ಬದಲಾಗಿದ್ದಾನೆ.

ಕನ್ನಡ ಚಿತ್ರ ಪ್ರೇಮಿಗಳ್ ನಿರೀಕ್ಷೆಯನ್ನು ಹೆಚ್ಚುವಂತೆ ಮಾಡಿದ್ದ "ವೇರ್ ಈಸ್ ಮೈ ಕನ್ನಡಕ" ಚಿತ್ರದ ನಾಯಕ ಬದಲಾಗಿದ್ದಾನೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಲಿದ್ದಾರೆ ಎಂದು ಹೇಳಲಾಗಿದ್ದ ಚಿತ್ರಕ್ಕೀಗ "ಮನಸಾರೆ" ಖ್ಯಾತಿಯ ದಿಗಂತ್ ಬಂದಿದ್ದಾರೆ.
ಈ ಮುನ್ನ ಗಣೇಶ್ ಡೇಟ್ಸ್ ಹೊಂದಾಣಿಕೆಯಾಗದೆ ಇದ್ದ ಕಾರಣ ಚಿತ್ರದ ಚಿತ್ರೀಕರಣ ಮುಂಡೂಡಿದ್ದರು. ಆದರೆ ಈಗ ಅವರು ಚಿತ್ರವನ್ನು ಕೈಬಿಟ್ಟಿದ್ದಾರೆ.ಆ ವೇಳೆ ಗಣೇಶ್ ಸ್ವತಃ ದಿಗಂತ್ ಈ ಪಾತ್ರಕ್ಕೆ ಸೂಕ್ತವೆಂದು ಚಿತ್ರ ನಿರ್ಮಾಪಕರಿಗೆ ಸೂಚಿಸಿದ್ದಾರೆ.
"ವೇರ್ ಈಸ್ ಮೈ ಕನ್ನಡಕ" ಪತ್ರಲೇಖಾ ಹಾಗೂ ಅರ್ಬಾಜ್ ಖಾನ್ ಅವರ ಫಾಲಿಗೆ ಚೊಚ್ಚಲ ಕನ್ನಡ ಚಿತ್ರವಾಗಿದೆ. ದಿಗಂತ್ ತಮ್ಮ ಚಿತ್ರದಲ್ಲಿ ಅಭಿನಯಿಸುವ ವಿಚಾರವನ್ನು ಶೀಘ್ರವೇ ಚಿತ್ರನಿರ್ಮಾಪಕರು ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ. ಅಲ್ಲದೆ ಚಿತ್ರೀಕರಣ ಎಂದಿನಿಂದ ಪ್ರಾರಂಭವಾಗಲಿದೆ ಎನ್ನುವುದನ್ನೂ ಸಹ ಅವರು ಇನ್ನಷ್ಟೇ ಹೇಳಬೇಕಿದೆ.
ಚಿತ್ರದ ಬಹುಮುಖ್ಯ ಭಾಗಗಳನ್ನು ಲಂಡನ್, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಿಸಲು ಚಿತ್ರತಂಡ ಯೋಜಿಸಿದೆ.ಸಧ್ಯ ದಿಗಂತ್ "ಹುಟ್ಟುಹಬ್ಬದ ಶುಭಾಶಯಗಳು" ಚಿತ್ರದ ಶೂಟಿಂಗ್ ನಲ್ಲಿದ್ದು ಪುನೀತ್ ರಾಜ್ ಕುಮಾರ್ ಅಭಿನಯದ "ಯುವರತ್ನ" ಚಿತ್ರದಲ್ಲಿಯೂ ಮಹತ್ವದ ಪಾತ್ರ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್