ಗಣೇಶ್ 
ಸಿನಿಮಾ ಸುದ್ದಿ

'ವೇರ್ ಈಸ್ ಮೈ ಕನ್ನಡಕ' ಚಿತ್ರ ಕೈಬಿಟ್ಟ ಗಣೇಶ್, ಬದಲಿ ನಾಯಕರಾರು ಗೊತ್ತಾ?

ಕನ್ನಡ ಚಿತ್ರ ಪ್ರೇಮಿಗಳ್ ನಿರೀಕ್ಷೆಯನ್ನು ಹೆಚ್ಚುವಂತೆ ಮಾಡಿದ್ದ "ವೇರ್ ಈಸ್ ಮೈ ಕನ್ನಡಕ" ಚಿತ್ರದ ನಾಯಕ ಬದಲಾಗಿದ್ದಾನೆ.

ಕನ್ನಡ ಚಿತ್ರ ಪ್ರೇಮಿಗಳ್ ನಿರೀಕ್ಷೆಯನ್ನು ಹೆಚ್ಚುವಂತೆ ಮಾಡಿದ್ದ "ವೇರ್ ಈಸ್ ಮೈ ಕನ್ನಡಕ" ಚಿತ್ರದ ನಾಯಕ ಬದಲಾಗಿದ್ದಾನೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಲಿದ್ದಾರೆ ಎಂದು ಹೇಳಲಾಗಿದ್ದ ಚಿತ್ರಕ್ಕೀಗ "ಮನಸಾರೆ" ಖ್ಯಾತಿಯ ದಿಗಂತ್ ಬಂದಿದ್ದಾರೆ.
ಈ ಮುನ್ನ ಗಣೇಶ್ ಡೇಟ್ಸ್ ಹೊಂದಾಣಿಕೆಯಾಗದೆ ಇದ್ದ ಕಾರಣ ಚಿತ್ರದ ಚಿತ್ರೀಕರಣ ಮುಂಡೂಡಿದ್ದರು. ಆದರೆ ಈಗ ಅವರು ಚಿತ್ರವನ್ನು ಕೈಬಿಟ್ಟಿದ್ದಾರೆ.ಆ ವೇಳೆ ಗಣೇಶ್ ಸ್ವತಃ ದಿಗಂತ್ ಈ ಪಾತ್ರಕ್ಕೆ ಸೂಕ್ತವೆಂದು ಚಿತ್ರ ನಿರ್ಮಾಪಕರಿಗೆ ಸೂಚಿಸಿದ್ದಾರೆ.
"ವೇರ್ ಈಸ್ ಮೈ ಕನ್ನಡಕ" ಪತ್ರಲೇಖಾ ಹಾಗೂ ಅರ್ಬಾಜ್ ಖಾನ್ ಅವರ ಫಾಲಿಗೆ ಚೊಚ್ಚಲ ಕನ್ನಡ ಚಿತ್ರವಾಗಿದೆ. ದಿಗಂತ್ ತಮ್ಮ ಚಿತ್ರದಲ್ಲಿ ಅಭಿನಯಿಸುವ ವಿಚಾರವನ್ನು ಶೀಘ್ರವೇ ಚಿತ್ರನಿರ್ಮಾಪಕರು ಅಧಿಕೃತವಾಗಿ ಬಹಿರಂಗಪಡಿಸಲಿದ್ದಾರೆ. ಅಲ್ಲದೆ ಚಿತ್ರೀಕರಣ ಎಂದಿನಿಂದ ಪ್ರಾರಂಭವಾಗಲಿದೆ ಎನ್ನುವುದನ್ನೂ ಸಹ ಅವರು ಇನ್ನಷ್ಟೇ ಹೇಳಬೇಕಿದೆ.
ಚಿತ್ರದ ಬಹುಮುಖ್ಯ ಭಾಗಗಳನ್ನು ಲಂಡನ್, ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಿಸಲು ಚಿತ್ರತಂಡ ಯೋಜಿಸಿದೆ.ಸಧ್ಯ ದಿಗಂತ್ "ಹುಟ್ಟುಹಬ್ಬದ ಶುಭಾಶಯಗಳು" ಚಿತ್ರದ ಶೂಟಿಂಗ್ ನಲ್ಲಿದ್ದು ಪುನೀತ್ ರಾಜ್ ಕುಮಾರ್ ಅಭಿನಯದ "ಯುವರತ್ನ" ಚಿತ್ರದಲ್ಲಿಯೂ ಮಹತ್ವದ ಪಾತ್ರ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT