ನಟಿ ಸುಧಾರಾಣಿಗೆ ಪ್ರತಿಷ್ಟಿತ ಅಂತರಾಷ್ಟ್ರೀಯ ಪ್ರಶಸ್ತಿ 
ಸಿನಿಮಾ ಸುದ್ದಿ

ನಟಿ ಸುಧಾರಾಣಿಗೆ ಪ್ರತಿಷ್ಟಿತ ಅಂತರಾಷ್ಟ್ರೀಯ ಪ್ರಶಸ್ತಿ

ಕನ್ನಡದ ಖ್ಯಾತ ನಟಿ ಸುಧಾರಾಣಿಯವರಿಗೆ ಪ್ರತಿಷ್ಟಿತ ಆರ್ಯಭಟ ಅಂತರಾಷ್ಟ್ರೀಯ ಪುರಸ್ಕಾರ ದೊರಕಿದೆ.

ಬೆಂಗಳೂರು: ಕನ್ನಡದ ಖ್ಯಾತ ನಟಿ ಸುಧಾರಾಣಿಯವರಿಗೆ ಪ್ರತಿಷ್ಟಿತ ಆರ್ಯಭಟ ಅಂತರಾಷ್ಟ್ರೀಯ ಪುರಸ್ಕಾರ ದೊರಕಿದೆ.
ಚಿತ್ರರಂಗಕ್ಕೆ ನಟಿ ಸುಧಾರಾಣಿ ಸಲ್ಲಿಸಿದ ಸೇವೆ ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಸುಧಾರಆಣಿ ತಾವು ಪ್ರಶಸ್ತಿ ಸ್ವೀಕರಿಸಿದ ಕ್ಷಣದ ಕೆಲ ಚಿತ್ರಗಳನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
"ಅತ್ಯಂತ ಹಳೆಯ ಪಾರಂಪರಿಕ ಪ್ರಶಸ್ತಿಯಲ್ಲಿ ಒಂದಾಗಿರುವ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸುತ್ತಿರುವುದಕ್ಕಾಗಿ ಹೆಮ್ಮೆ ಎನಿಸಿದೆ.ಕನ್ನಡ ಚಿತ್ರರಂಗಕ್ಕೆ ನನ್ನ ಸೇವೆಗಾಗಿ ಈ ಪ್ರಶಸ್ತಿ ಲಭಿಸಿದೆ" ಸುಧಾರಾಣಿ ಬರೆದುಕೊಂಡಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ "ಆನಂದ್" ಮೂಲಕ ಚಿತ್ರ್ರಂಗ ಪ್ರವೇಶಿಸಿದ್ದ ಸುಧಾರಾಣಿ  ರಣರಂಗ, ಕೃಷ್ಣ ನೀ ಕುಣಿದಾಗ, ಪಂಚಮವೇದ, ಮೈಸೂರು ಮಲ್ಲಿಗೆ, ಮಣ್ಣಿನ ದೋಣಿ ಹೀಗೆ ಸಾಲು ಸಾಲು ಯಶಸ್ವಿ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿದ್ದಾರೆ. ಇವರು ಇದುವರೆಗೆ ಹಲವು ಬಾರಿ ರಾಜ್ಯ ಸರ್ಕಾರದ ಪ್ರಶಸ್ತಿ, ಫಿಲ್ಮ್ ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಇತ್ತೀಚಿನ ದಿನಗಳಲ್ಲಿ ನಟಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು ತುರ್ತು ನಿರ್ಗಮನ, ಅಮರ್ ಹಾಗೂ ಗೀತಾ ಚಿತ್ರಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT